Amit Shah
ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನ ಬಳಿ ಸುಮಾರು ಎಂಟು ಸಾವಿರ ಪುಸ್ತಕಗಳಿವೆ. ಅವುಗಳನ್ನು ಓದಲು ಸಹ ನನಗೆ ಸಮಯ ಇಲ್ಲ. ಹೀಗಾಗಿ ನಿವೃತ್ತಿ ನಂತರ ಓದಿನತ್ತ ಗಮನ ಹರಿಸುವುದಾಗಿಯೂ ಅವರು ಹೇಳಿದ್ದಾರೆ.
ಶಾಸ್ತ್ರೀಯ ಸಂಗೀತದ ಬಗ್ಗೆಯೂ ಒಲವಿದೆ. ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಗೋಧಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಖಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…