ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪದೇ ಪದೇ ಸುಳ್ಳು ಭರವಸೆಗಳನ್ನು ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಜನತೆ ತೋರಿಸಿಕೊಟ್ಟಿದ್ದಾರೆ. ಕಲುಷಿತಗೊಂಡ ಯಮುನಾ ನದಿ, ಕಲುಷಿತ ಕುಡಿಯುವ ನೀರು, ಒಡೆದ ರಸ್ತೆಗಳು, ತುಂಬಿ ತುಳುಕುತ್ತಿರುವ ಚರಂಡಿಗಳು ಪ್ರತಿ ಬೀದಿಯಲ್ಲಿ ತೆರೆದಿರುವ ಮದ್ಯದಂಗಡಿಗಳಿಗೆ ಸಾರ್ವಜನಿಕರು ತಮ್ಮ ಮತಗಳ ಮೂಲಕ ಉತ್ತರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ದೆಹಲಿಯಲ್ಲಿ ಈ ವಿಜಯಕ್ಕಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ್ ಹಾಗೂ ಎಲ್ಲಾ ಕಾರ್ಯಕರ್ತರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಅಲ್ಲದೇ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೆಹಲಿ ಆದರ್ಶ ರಾಜಧಾನಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಈ ಹಿಂದೆ ಇದ್ದ ಸರ್ಕಾರದ ಸುಳ್ಳಿನ ಆಡಳಿತ ಕೊನೆಗೊಂಡಿದೆ. ಇದು ಅವರ ದುರಹಂಕಾರ ಹಾಗೂ ಅರಾಜಕತೆಯ ಸೋಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಮೋದಿ ಕೀ ಗ್ಯಾರಂಟಿಗೆ ಗೆಲುವು ಸಿಕ್ಕಿದೆ. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆಗಳು. ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಲು ಮತ್ತು ದೆಹಲಿಯನ್ನು ವಿಶ್ವದ ನಂಬರ್.1 ರಾಜಧಾನಿ ಮಾಡಲು ಸಂಕಲ್ಪ ಮಾಡಿದೆ. ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ದೆಹಲಿ ಮಾದರಿಯಾಗಲಿದೆ ಎಂದು ಭರವಸೆಗಳನ್ನು ಉಲ್ಲಂಘಿಸುವವರಿಗೆ ದೆಹಲಿ ಜನರು ಪಾಠವನ್ನು ಕಲಿಸಿದ್ದಾರೆ ಎಂದು ಹೇಳಿದ್ದಾರೆ.
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…