ದೇಶ- ವಿದೇಶ

ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ: ಅಮಿತ್‌ ಶಾ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ ಸುಳ್ಳು ಭರವಸೆಗಳನ್ನು ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಜನತೆ ತೋರಿಸಿಕೊಟ್ಟಿದ್ದಾರೆ. ಕಲುಷಿತಗೊಂಡ ಯಮುನಾ ನದಿ, ಕಲುಷಿತ ಕುಡಿಯುವ ನೀರು, ಒಡೆದ ರಸ್ತೆಗಳು, ತುಂಬಿ ತುಳುಕುತ್ತಿರುವ ಚರಂಡಿಗಳು ಪ್ರತಿ ಬೀದಿಯಲ್ಲಿ ತೆರೆದಿರುವ ಮದ್ಯದಂಗಡಿಗಳಿಗೆ ಸಾರ್ವಜನಿಕರು ತಮ್ಮ ಮತಗಳ ಮೂಲಕ ಉತ್ತರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ದೆಹಲಿಯಲ್ಲಿ ಈ ವಿಜಯಕ್ಕಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ್‌ ಹಾಗೂ ಎಲ್ಲಾ ಕಾರ್ಯಕರ್ತರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಅಲ್ಲದೇ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೆಹಲಿ ಆದರ್ಶ ರಾಜಧಾನಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಹಿಂದೆ ಇದ್ದ ಸರ್ಕಾರದ ಸುಳ್ಳಿನ ಆಡಳಿತ ಕೊನೆಗೊಂಡಿದೆ. ಇದು ಅವರ ದುರಹಂಕಾರ ಹಾಗೂ ಅರಾಜಕತೆಯ ಸೋಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಮೋದಿ ಕೀ ಗ್ಯಾರಂಟಿಗೆ ಗೆಲುವು ಸಿಕ್ಕಿದೆ. ಈ ಬೃಹತ್‌ ಜನಾದೇಶಕ್ಕಾಗಿ ದೆಹಲಿಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆಗಳು. ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಲು ಮತ್ತು ದೆಹಲಿಯನ್ನು ವಿಶ್ವದ ನಂಬರ್‌.1 ರಾಜಧಾನಿ ಮಾಡಲು ಸಂಕಲ್ಪ ಮಾಡಿದೆ. ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ದೆಹಲಿ ಮಾದರಿಯಾಗಲಿದೆ ಎಂದು ಭರವಸೆಗಳನ್ನು ಉಲ್ಲಂಘಿಸುವವರಿಗೆ ದೆಹಲಿ ಜನರು ಪಾಠವನ್ನು ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

16 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago