ದೇಶ- ವಿದೇಶ

ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ: ಅಮಿತ್‌ ಶಾ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ ಸುಳ್ಳು ಭರವಸೆಗಳನ್ನು ನೀಡಿ ಸಾರ್ವಜನಿಕರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಜನತೆ ತೋರಿಸಿಕೊಟ್ಟಿದ್ದಾರೆ. ಕಲುಷಿತಗೊಂಡ ಯಮುನಾ ನದಿ, ಕಲುಷಿತ ಕುಡಿಯುವ ನೀರು, ಒಡೆದ ರಸ್ತೆಗಳು, ತುಂಬಿ ತುಳುಕುತ್ತಿರುವ ಚರಂಡಿಗಳು ಪ್ರತಿ ಬೀದಿಯಲ್ಲಿ ತೆರೆದಿರುವ ಮದ್ಯದಂಗಡಿಗಳಿಗೆ ಸಾರ್ವಜನಿಕರು ತಮ್ಮ ಮತಗಳ ಮೂಲಕ ಉತ್ತರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ದೆಹಲಿಯಲ್ಲಿ ಈ ವಿಜಯಕ್ಕಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ್‌ ಹಾಗೂ ಎಲ್ಲಾ ಕಾರ್ಯಕರ್ತರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಅಲ್ಲದೇ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೆಹಲಿ ಆದರ್ಶ ರಾಜಧಾನಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಹಿಂದೆ ಇದ್ದ ಸರ್ಕಾರದ ಸುಳ್ಳಿನ ಆಡಳಿತ ಕೊನೆಗೊಂಡಿದೆ. ಇದು ಅವರ ದುರಹಂಕಾರ ಹಾಗೂ ಅರಾಜಕತೆಯ ಸೋಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಮೋದಿ ಕೀ ಗ್ಯಾರಂಟಿಗೆ ಗೆಲುವು ಸಿಕ್ಕಿದೆ. ಈ ಬೃಹತ್‌ ಜನಾದೇಶಕ್ಕಾಗಿ ದೆಹಲಿಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆಗಳು. ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಲು ಮತ್ತು ದೆಹಲಿಯನ್ನು ವಿಶ್ವದ ನಂಬರ್‌.1 ರಾಜಧಾನಿ ಮಾಡಲು ಸಂಕಲ್ಪ ಮಾಡಿದೆ. ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ದೆಹಲಿ ಮಾದರಿಯಾಗಲಿದೆ ಎಂದು ಭರವಸೆಗಳನ್ನು ಉಲ್ಲಂಘಿಸುವವರಿಗೆ ದೆಹಲಿ ಜನರು ಪಾಠವನ್ನು ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago