ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶದಲ್ಲಿ ಟೆರರಿಸಂ ಕಡಿಮೆಯಾಗಿದ್ದು, ಈ ದೇಶದಲ್ಲಿ ಇದೀಗ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕೇಂದ್ರ ಗೃಹ ಅಮಿತ್ ಶಾ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದಿನ ಸರ್ಕಾರಗಳ ವರ್ತನೆ ಸಡಿಲವಾಗಿತ್ತು. ಆದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರಾಷ್ಟ್ರದ ಭದ್ರತೆ ಬಲಿಷ್ಟಗೊಂಡಿದೆ. ಅಲ್ಲದೇ ಗೃಹ ಸಚಿವಾಲಯದಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದ್ದು, ನಾವು ಕಾಶ್ಮೀರಿ ಪಂಡಿತರಿಗೆ ಮೀಸಲಾತಿಯನ್ನ ನೀಡಿದ್ದೇವೆ. ಹೀಗಾಗಿ ನಾವು ಭದ್ರತಾ ಪಡೆಗಳ ವಿಶ್ವಾಸ ಹೆಚ್ಚಿಸಿದ್ದೇವೆ ಎಂದು ಹೇಳಿದರು.
ಇನ್ನು ನಾವು ನಕ್ಸಲರ ಆರ್ಥಿಕ ಬೆನ್ನೆಲುಬು ಮುರಿದ್ದೇವೆ. ನಮ್ಮ ಸೇನೆಯೂ ಒಬ್ಬ ನಕ್ಸಲರನ್ನೂ ಬಿಡುವುದಿಲ್ಲ. ದೇಶದಲ್ಲಿ ನಕ್ಸಲಿಸಂ ಕೊನೆಗೊಳಿಸುವುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ 2026ರ ಮಾರ್ಚ್.31ರೊಳಗೆ ದೇಶದಲ್ಲಿ ಸಂಪೂರ್ಣವಾಗಿ ನಕ್ಸಲಿಸಂ ಕೊನೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…