ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ: ಅಮಿತ್‌ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶದಲ್ಲಿ ಟೆರರಿಸಂ ಕಡಿಮೆಯಾಗಿದ್ದು, ಈ ದೇಶದಲ್ಲಿ ಇದೀಗ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕೇಂದ್ರ ಗೃಹ ಅಮಿತ್‌ ಶಾ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದಿನ ಸರ್ಕಾರಗಳ ವರ್ತನೆ ಸಡಿಲವಾಗಿತ್ತು. ಆದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರಾಷ್ಟ್ರದ ಭದ್ರತೆ ಬಲಿಷ್ಟಗೊಂಡಿದೆ. ಅಲ್ಲದೇ ಗೃಹ ಸಚಿವಾಲಯದಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದ್ದು, ನಾವು ಕಾಶ್ಮೀರಿ ಪಂಡಿತರಿಗೆ ಮೀಸಲಾತಿಯನ್ನ ನೀಡಿದ್ದೇವೆ. ಹೀಗಾಗಿ ನಾವು ಭದ್ರತಾ ಪಡೆಗಳ ವಿಶ್ವಾಸ ಹೆಚ್ಚಿಸಿದ್ದೇವೆ ಎಂದು ಹೇಳಿದರು.

ಇನ್ನು ನಾವು ನಕ್ಸಲರ ಆರ್ಥಿಕ ಬೆನ್ನೆಲುಬು ಮುರಿದ್ದೇವೆ. ನಮ್ಮ ಸೇನೆಯೂ ಒಬ್ಬ ನಕ್ಸಲರನ್ನೂ ಬಿಡುವುದಿಲ್ಲ. ದೇಶದಲ್ಲಿ ನಕ್ಸಲಿಸಂ ಕೊನೆಗೊಳಿಸುವುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ 2026ರ ಮಾರ್ಚ್‌.31ರೊಳಗೆ ದೇಶದಲ್ಲಿ ಸಂಪೂರ್ಣವಾಗಿ ನಕ್ಸಲಿಸಂ ಕೊನೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

9 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

11 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

12 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

13 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

15 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 hours ago