ನವದೆಹಲಿ: ಆಂಧ್ರಪ್ರದೇಶ ಸಿಎಂ ಎನ್.ಚಂದ್ರಬಾಬು ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನೀಡಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟು, ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಿಎಂ ಚಂದ್ರಬಾಬು ನಾಯ್ಡು ವ್ಯಕ್ತಪಡಿಸಿದರು.
ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಚನಾತ್ಮಕ ಭೇಟಿ ನಡೆಯಿತು. ಆಂಧ್ರಪ್ರದೇಶ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಮತ್ತೆ ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇದರ ಜೊತೆ ಸಿಎಂ ಚಂದ್ರಬಾಬು ನಾಯ್ಡು ಅವರು, ಕೇಂದ್ರದ ಹಲವು ಸಚಿವರನ್ನೂ ಭೇಟಿ ಮಾಡಿದ್ದಾರೆ. ಸಚಿವ ನಿತಿನ್ ಗಡ್ಕರಿ, ಪಿಯುಷ್ ಗೋಯಲ್, ಶಿವರಾಜ್ ಸಿಂಗ್ ಚೌಹಾಣ್ ಅವರನ್ನೂ ಸಹ ಭೇಟಿ ಮಾಡಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…