ನವದೆಹಲಿ: ಆಂಧ್ರಪ್ರದೇಶ ಸಿಎಂ ಎನ್.ಚಂದ್ರಬಾಬು ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನೀಡಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟು, ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಿಎಂ ಚಂದ್ರಬಾಬು ನಾಯ್ಡು ವ್ಯಕ್ತಪಡಿಸಿದರು.
ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಚನಾತ್ಮಕ ಭೇಟಿ ನಡೆಯಿತು. ಆಂಧ್ರಪ್ರದೇಶ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಮತ್ತೆ ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇದರ ಜೊತೆ ಸಿಎಂ ಚಂದ್ರಬಾಬು ನಾಯ್ಡು ಅವರು, ಕೇಂದ್ರದ ಹಲವು ಸಚಿವರನ್ನೂ ಭೇಟಿ ಮಾಡಿದ್ದಾರೆ. ಸಚಿವ ನಿತಿನ್ ಗಡ್ಕರಿ, ಪಿಯುಷ್ ಗೋಯಲ್, ಶಿವರಾಜ್ ಸಿಂಗ್ ಚೌಹಾಣ್ ಅವರನ್ನೂ ಸಹ ಭೇಟಿ ಮಾಡಿದ್ದಾರೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…