ದೇಶ- ವಿದೇಶ

ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಅಣ್ಣಾ ಹಜಾರೆ ಕಿಡಿ

ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ ಹಜಾರೆ ಅವರು, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದರು.

ನಾನು ಈ ವಿಚಾರವನ್ನು ಕೇಜ್ರಿವಾಲ್‌ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಸೋತಿದ್ದಾರೆ ಎಂದು ದೂರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು. ಆದರೆ ಅವರು ಈ ವಿಚಾರದ ಕಡೆಗೆ ತಲೆ ಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರೂ ಅದು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

28 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

40 mins ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

56 mins ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

1 hour ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

2 hours ago