ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ ಹಜಾರೆ ಅವರು, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದರು.
ನಾನು ಈ ವಿಚಾರವನ್ನು ಕೇಜ್ರಿವಾಲ್ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಸೋತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು. ಆದರೆ ಅವರು ಈ ವಿಚಾರದ ಕಡೆಗೆ ತಲೆ ಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರೂ ಅದು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ ಎಂದರು.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…