ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ ಹಜಾರೆ ಅವರು, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದರು.
ನಾನು ಈ ವಿಚಾರವನ್ನು ಕೇಜ್ರಿವಾಲ್ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಸೋತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು. ಆದರೆ ಅವರು ಈ ವಿಚಾರದ ಕಡೆಗೆ ತಲೆ ಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರೂ ಅದು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…