ದೇಶ- ವಿದೇಶ

K.Annamalai : ನಡುರಸ್ತೆಲಿ ಶರ್ಟ್‌ ಬಿಚ್ಚಿ ಚಾಟಿಯಿಂದ ಬಾರಿಸಿಕೊಂಡ ಅಣ್ಣಾಮಲೈ

ಚನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಬೀದಿಗಿಳಿದು ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಎಲ್ಲರಿಗೂ ಶಾಕ್‌ ಕೊಟ್ಟಿದ್ದಾರೆ.

ಹೌದು…ಅಣ್ಣಾಮಲೈ ಅವರು ಇಂದು ತಮ್ಮ ನಿವಾಸದ ಎದುರು ಛಡಿಏಟು ಬಾರಿಸಿಕೊಂಡು ಪ್ರತಿಭಟನೆ ಮಾಡಿರುವ ವಿಡಿಯೋ ವೈರಲ್‌ ಆಗಿದೆ.

ಹಸಿರು ಮುಂಡು ಧರಿಸಿ, ಶರ್ಟ್ ರಹಿತ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ಮಗೆ ತಾವೇ ಹೊಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?, ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ ಮತ್ತು ಶೇಮ್ ಆನ್ ಯೂ ಎಂಬ ಘೋಷಣೆಗಳ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.

ಅಣ್ಣಾಮಲೈ ಅವರನ್ನು ತಡೆಯಲು ಬೆಂಬಲಿಗರು ಧಾವಿಸುವ ಮುನ್ನವೇ ಅವರು ಸುಮಾರು ಎಂಟು ಬಾರಿ ಚಾಟಿ ಯಲ್ಲಿ ಹೊಡೆದುಕೊಂಡಿದ್ದರು. ಸ್ವಯಂ ಚಾಟಿ ಬೀಸಿದ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಯ ಮಾರ್ಗಗಳು ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.

ನಮನ್ನು ನಾವೇ ಹೊಡೆದುಕೊಳ್ಳುವುದು, ನಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮನ್ನು ನಾವು ಹಾಕಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವುದು ಒಂದು ಟಿಪ್ಪಿಂಗ್ ಪಾಯಿಂಟ್ ಮಾತ್ರ ಎಂದು ಅವರು ಹೇಳಿದ್ದಾರೆ.

ನನ್ನ ಅನೇಕ ಪೂರ್ವಜರು ಈ ಮಾರ್ಗದಲ್ಲಿ ನಡೆದರು ಮತ್ತು ನಾನು ಕೂಡ ಅದನ್ನು ಆರಿಸಿಕೊಂಡಿದ್ದೇನೆ. ಇದು ಉನ್ನತ ಶಕ್ತಿಗೆ ಶರಣಾಗುವ, ದೇವರಿಗೆ ಶರಣಾಗುವ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯಸ್ಥರು ಸೇರಿಸಿದರು.

ತಮಿಳುನಾಡಿನಲ್ಲಿರುವ ಡಿಎಂಕೆ ಸರ್ಕಾರದಿಂದ ಜನರಿಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸರ್ಕಾರ ಹೋಗುವವರೆಗೆ ತಾವು ಕಾಲಿಗೆ ಚಪ್ಪಲಿ ತೊಡುವುದಿಲ್ಲ ಎಂದು ಅವರು  ಘೋಷಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

34 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

1 hour ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

3 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

3 hours ago