ಚನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬೀದಿಗಿಳಿದು ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ.
ಹೌದು…ಅಣ್ಣಾಮಲೈ ಅವರು ಇಂದು ತಮ್ಮ ನಿವಾಸದ ಎದುರು ಛಡಿಏಟು ಬಾರಿಸಿಕೊಂಡು ಪ್ರತಿಭಟನೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಹಸಿರು ಮುಂಡು ಧರಿಸಿ, ಶರ್ಟ್ ರಹಿತ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ಮಗೆ ತಾವೇ ಹೊಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?, ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ ಮತ್ತು ಶೇಮ್ ಆನ್ ಯೂ ಎಂಬ ಘೋಷಣೆಗಳ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.
ಅಣ್ಣಾಮಲೈ ಅವರನ್ನು ತಡೆಯಲು ಬೆಂಬಲಿಗರು ಧಾವಿಸುವ ಮುನ್ನವೇ ಅವರು ಸುಮಾರು ಎಂಟು ಬಾರಿ ಚಾಟಿ ಯಲ್ಲಿ ಹೊಡೆದುಕೊಂಡಿದ್ದರು. ಸ್ವಯಂ ಚಾಟಿ ಬೀಸಿದ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಯ ಮಾರ್ಗಗಳು ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.
ನಮನ್ನು ನಾವೇ ಹೊಡೆದುಕೊಳ್ಳುವುದು, ನಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮನ್ನು ನಾವು ಹಾಕಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವುದು ಒಂದು ಟಿಪ್ಪಿಂಗ್ ಪಾಯಿಂಟ್ ಮಾತ್ರ ಎಂದು ಅವರು ಹೇಳಿದ್ದಾರೆ.
ನನ್ನ ಅನೇಕ ಪೂರ್ವಜರು ಈ ಮಾರ್ಗದಲ್ಲಿ ನಡೆದರು ಮತ್ತು ನಾನು ಕೂಡ ಅದನ್ನು ಆರಿಸಿಕೊಂಡಿದ್ದೇನೆ. ಇದು ಉನ್ನತ ಶಕ್ತಿಗೆ ಶರಣಾಗುವ, ದೇವರಿಗೆ ಶರಣಾಗುವ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯಸ್ಥರು ಸೇರಿಸಿದರು.
ತಮಿಳುನಾಡಿನಲ್ಲಿರುವ ಡಿಎಂಕೆ ಸರ್ಕಾರದಿಂದ ಜನರಿಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸರ್ಕಾರ ಹೋಗುವವರೆಗೆ ತಾವು ಕಾಲಿಗೆ ಚಪ್ಪಲಿ ತೊಡುವುದಿಲ್ಲ ಎಂದು ಅವರು ಘೋಷಿಸಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…