ಹೊಸದಿಲ್ಲಿ: ಕೃಷಿ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ ಪಿ) ಖರೀದಿಸಲಿದೆ ಎಂದು ಘೋಷಿಸಿದೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ರೈತರಿಗೆ ಎಂಎಸ್ಪಿ ಸಮಸ್ಯೆಯ ಕುರಿತು ಪೂರಕ ಪ್ರಶ್ನೆಗಳಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಮೋದಿ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲಬೆಲೆಗೆ ಖರೀದಿಸಲಿದೆ ಎಂದು ದೃಢಪಡಿಸಿದರು. ಎಂಎಸ್ಪಿಗೆ ಕಾನೂನು ಬೆಂಬಲಕ್ಕೆ ಒತ್ತಾಯಿಸಿ ರೈತರು ದೆಹಲಿಗೆ ರೈತರ ಕಾಲ್ನಡಿಗೆಯ ನಂತರ ಈ ಭರವಸೆ ನೀಡಲಾಯಿತು.
ಪ್ರತಿಪಕ್ಷಗಳು ಎಂದಿಗೂ ರೈತರನ್ನು ಗೌರವಿಸಿಲ್ಲ. ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಿಂದ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಶೇ. 50ರಷ್ಟು ಲಾಭವನ್ನು ನೀಡುವ ಮೂಲಕ ಕನಿಷ್ಠ ಬೆಂಬಲ ಬೆಲೆ ಲೆಕ್ಕಹಾಕಲು ನಿರ್ಧರಿಸಿದ್ದಾರೆ ಎಂದು ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸದನದಲ್ಲಿ ಹೇಳಿದರು.
ಬಳಿಕ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ತಮ್ಮ ಈ ಘೋಷಣೆಗಳನ್ನು ಬೆಂಬಲಿಸುವ ದಾಖಲೆಗಳನ್ನು ಸಲ್ಲಿಸುವಂತೆ ಹೇಳಿದರು. ಶಿವರಾಜ್ ಸಿಂಗ್ ಚೌಹಾಣ್ ಅದಕ್ಕೆ ಸಮ್ಮತಿ ಸೂಚಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…