ದೇಶ- ವಿದೇಶ

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. 57 ದಿನಗಳ ಕಾಲ ನಡೆಯುವ ಈ ಯಾತ್ರೆಯು ಆಗಸ್ಟ್ 28, ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು.

ಏಪ್ರಿಲ್.15ರಿಂದ ನೋಂದಣಿ: ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್.15ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ದೇಶಾದ್ಯಂತ ಎ&ಏ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯಸ್ ಬ್ಯಾಂಕ್‍ನ 554 ಶಾಖೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಪ್ರತಿ ಪರವಾನಗಿಗೆ 150 ಶುಲ್ಕವಿದೆ. ಅರ್ಜಿದಾರರು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಪ್ರಯಾಣದ ದಿನಾಂಕದಂತಹ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಕಡ್ಡಾಯ ಆರೋಗ್ಯ ಪ್ರಮಾಣಪತ್ರ (ಎಪ್ರಿಲ್ 8 ಅಥವಾ ನಂತರ ದಿನಾಂಕದ್ದು) ಸಲ್ಲಿಸಬೇಕು. ಇದರಲ್ಲಿ ಉಸಿರಾಟದ ತೊಂದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಸ್ತಮಾ, ಹೃದಯ ಕಾಯಿಲೆ, ಕೀಲುನೋವು, ಪಾಶ್ವವಾಯು ಇತ್ಯಾದಿ ವಿವರಗಳನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

21 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

21 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

21 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

22 hours ago