ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ.
ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. 57 ದಿನಗಳ ಕಾಲ ನಡೆಯುವ ಈ ಯಾತ್ರೆಯು ಆಗಸ್ಟ್ 28, ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು.
ಏಪ್ರಿಲ್.15ರಿಂದ ನೋಂದಣಿ: ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್.15ರಿಂದ ಆನ್ಲೈನ್ ಮತ್ತು ಆಫ್ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ದೇಶಾದ್ಯಂತ ಎ&ಏ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯಸ್ ಬ್ಯಾಂಕ್ನ 554 ಶಾಖೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಪ್ರತಿ ಪರವಾನಗಿಗೆ 150 ಶುಲ್ಕವಿದೆ. ಅರ್ಜಿದಾರರು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಪ್ರಯಾಣದ ದಿನಾಂಕದಂತಹ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.
ಕಡ್ಡಾಯ ಆರೋಗ್ಯ ಪ್ರಮಾಣಪತ್ರ (ಎಪ್ರಿಲ್ 8 ಅಥವಾ ನಂತರ ದಿನಾಂಕದ್ದು) ಸಲ್ಲಿಸಬೇಕು. ಇದರಲ್ಲಿ ಉಸಿರಾಟದ ತೊಂದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಸ್ತಮಾ, ಹೃದಯ ಕಾಯಿಲೆ, ಕೀಲುನೋವು, ಪಾಶ್ವವಾಯು ಇತ್ಯಾದಿ ವಿವರಗಳನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…