Nipah virus
ಪಾಲಕ್ಕಾಡ್: ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ ಧನಾತ್ಮಕ ಪರೀಕ್ಷೆ ವರದಿ ಬಂದಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ.
ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಿಂದ ಅಂತಿಮ ದೃಢೀಕರಣಕ್ಕಾಗಿ ಕಾಯಲಾಗುತ್ತಿದ್ದು, ಶಂಕಿತ ನಿಫಾ ವೈರಸ್ನಿಂದ ಮೃತಪಟ್ಟ ಮೊದಲನೆಯವರು ಮಲಪ್ಪುರಂ ಮೂಲದವರಾಗಿದ್ದಾರೆ.
ಹೊಸ ಶಂಕಿತ ಪ್ರಕರಣಕ್ಕೆ ಪ್ರತಿಕ್ರಿಯೆಯಾಗಿ ಕೇರಳ ಸರ್ಕಾರವು ಸಂಪರ್ಕ ಪತ್ತೆಹಚ್ಚುವಿಕೆ ಮತ್ತು ಕ್ಷೇತ್ರ ಕಣ್ಗಾವಲು ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಮೃತರೊಂದಿಗೆ ಸಂಪರ್ಕಕ್ಕೆ ಬಂದ 46 ವ್ಯಕ್ತಿಗಳ ಪಟ್ಟಿಯನ್ನ ಸಿದ್ಧಪಡಿಸಲಾಗಿದ್ದು, ರೋಗಿಯ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿ ಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಟವರ್ ಡೇಟಾವನ್ನು ಬಳಸಲಾಗಿದೆ.
ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡು ಮತ್ತು ತ್ರಿಶೂರ್ ಜಿಲ್ಲೆಗಳಾದ್ಯಂತ ಆಸ್ಪತ್ರೆಗಳನ್ನು ನಿಫಾ ಸೋಂಕಿತರ ಚಿಕಿತ್ಸೆಗೆ ಸಜ್ಜುಗೊಳಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…