ದೇಶ- ವಿದೇಶ

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು

ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದು, ಏಪ್ರಿಲ್ 6 ರ ವೇಳೆಗೆ ಮುಂಬೈ ತಲುಪುವ ನಿರೀಕ್ಷೆಯಿದೆ.

ಟ್ಯಾಂಕರ್ ಸುರಕ್ಷಿತವಾಗಿ ಸಂಚರಿಸುತ್ತಿದೆ ಮತ್ತು ನಿಗದಿತ ಸಮಯದಲ್ಲಿ ತನ್ನ ಪ್ರಯಾಣವನ್ನು ಪೂರ್ಣಗೊಳಿಸುವ ಹಾದಿಯಲ್ಲಿದೆ ಎಂದು ಹಡಗು ನಿರ್ದೇಶನಾಲಯ ತಿಳಿಸಿದೆ.

ಕಳೆದ ವಾರ ಕಾಂಡ್ಲಾದಲ್ಲಿ ಜಗವಸಂತ್ ಮತ್ತು ನ್ಯೂ ಮಂಗಳೂರಿನಲ್ಲಿ ಪೈನ್ ಗ್ಯಾಸ್ ಸೇರಿದಂತೆ ಇತರ ಟ್ಯಾಂಕರ್‌ಗಳು ಯಶಸ್ವಿಯಾಗಿ ಸರಬರಾಜು ಮಾಡಿದ ನಂತರ ಎಲ್‌ಪಿಜಿ ಟ್ಯಾಂಕರ್, ಗ್ರೀನ್ ಸಾನ್ವಿ, ಹಾರ್ಮುಜ್ ಜಲಸಂಧಿಯ ಮೂಲಕ ಆಗಮಿಸುತ್ತಿದೆ. ಇದು ಗಲ್ಛ್ ಪ್ರದೇಶದಲ್ಲಿನ ಉದ್ವಿಗ್ನತೆಯ ಹೊರತಾಗಿಯೂ ಭಾರತದ ಎಲ್‌ಪಿಜಿ ಪೂರೈಕೆ ಮುಂದುವರಿದಿದೆ ಎಂಬುದನ್ನು ತೋರಿಸುತ್ತದೆ.

ಗ್ರೀನ್ ಆಶಾ ಮತ್ತು ಜಗ್ ವಿಕ್ರಮ್ ಎಂಬ ಎರಡು ಎಲ್‌ಪಿಜಿ ವಾಹಕಗಳು ಪ್ರಸ್ತುತ ಜಲಸಂಧಿಯ ಮೂಲಕ ಹಾದುಹೋಗಲು ಭಾರತೀಯ ನೌಕಾಪಡೆಯ ಅನುಮತಿಗಾಗಿ ಕಾಯುತ್ತಿವೆ. ಈ ಪ್ರದೇಶದಲ್ಲಿ ಸಿಲುಕಿರುವ ಎಲ್ಲ ಭಾರತೀಯ ಹಡಗುಗಳು ಸುರಕ್ಷಿತವಾಗಿ ಚಲಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಏತನಧ್ಯೆ ಟ್ಯಾಂಕರ್ ಬಿಡಬ್ಲು ಟಿವೈಆರ್ ಈಗಾಗಲೇ ಮುಂಬೈ ತಲುಪಿದೆ ಮತ್ತು ಅದರ ಸರಕುಗಳನ್ನು ಇಳಿಸುತ್ತಿದೆ, ಆದರೆ ಬಿಡ್ಲು ಇಎಲ್ ಎಂ ಅನ್ನು ಎನ್ನೋರ್ ಬಂದರಿಗೆ ಮರುಮಾರ್ಗದಲ್ಲಿ ಕಳುಹಿಸಲಾಗಿದ್ದು, ಶನಿವಾರ ಮುಂಜಾನೆ ತಲುಪುವ ನಿರೀಕ್ಷೆಯಿದೆ.

ಭಾರತವು ಪ್ರಸ್ತುತ ಗಲ್ಛ್ ಪ್ರದೇಶದಲ್ಲಿ ಹಲವಾರು ಹಡಗುಗಳನ್ನು ಹೊಂದಿದ್ದು, ಸುಮಾರು 20,500 ಭಾರತೀಯ ನಾವಿಕರು ಕರ್ತವ್ಯದಲ್ಲಿದ್ದಾರೆ. ಇವುಗಳಲ್ಲಿ 500 ಕ್ಕೂ ಹೆಚ್ಚು ಭಾರತೀಯ ಧ್ವಜ ಹೊಂದಿರುವ ಹಡಗುಗಳಿವೆ ಮತ್ತು ಪ್ರಾದೇಶಿಕ ಅಪಾಯಗಳ ನಡುವೆ 1,100 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

3 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago