ದೇಶ- ವಿದೇಶ

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ಹೊಸದಿಲ್ಲಿ : ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್‌ನ ಸಂಪೂರ್ಣ ಹಣ ಖೋತಾ ಆಗಲಿದೆ. ಟಿಕೆಟ್ ವಿತರಣೆ ಮತ್ತು ಮರುಪಾವತಿ ನೀತಿಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಗಮನಾರ್ಹ ಬದಲಾವಣೆಯನ್ನು ಬುಧವಾರದಿಂದ ಜಾರಿಗೆ ತಂದಿದೆ.

ಏ.1ರಿಂದ ರೈಲು ಹೊರಡುವ 8 ಗಂಟೆ ಮೊದಲು ಟಿಕೆಟ್ ರದ್ದುಗೊಳಿಸದಿದ್ದರೆ ನಿಮ್ಮ ಹಣ ರೀಫಂಡ್ ಆಗುವುದಿಲ್ಲ. ನೀವು ನಿಮ್ಮ ಪ್ರಯಾಣ ರದ್ದುಗೊಳಿಸಬೇಕಾದರೆ ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ಟಿಕೆಟ್ ರದ್ದು ಮಾಡಬೇಕಾಗುತ್ತದೆ.

ನಿರ್ಗಮನಕ್ಕೆ 24 ಗಂಟೆಗಳಿಂದ 8 ಗಂಟೆಗಳ ಮೊದಲು ಮಾಡಿದ ರದ್ದತಿಗೆ, ಪ್ರಯಾಣಿಕರು ಶೇ.50ರಷ್ಟು ಮರುಪಾವತಿಗೆ ಅರ್ಹರಾಗಿರುತ್ತಾರೆ. ಪ್ರಯಾಣಕ್ಕೆ 71 ಗಂಟೆಗಳಿಂದ 24 ಗಂಟೆಗಳ ಮೊದಲು ರದ್ದತಿ ಮಾಡಿದರೆ, ಶೇ.75ರಷ್ಟು ಮರುಪಾವತಿಯನ್ನು ಒದಗಿಸಲಾಗುತ್ತದೆ. ಇದಕ್ಕೂ ಮೊದಲು, ಪ್ರಯಾಣಕ್ಕೆ 72 ಗಂಟೆಗಳ ಮೊದಲು ರದ್ದುಗೊಳಿಸಿದಾಗಲೂ ಪ್ರಯಾಣಿಕರು ಪೂರ್ಣ ಮರುಪಾವತಿಯನ್ನು ಪಡೆಯುತ್ತಿದ್ದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ನೆಟ್‌ವರ್ಕ್ ಅನ್ನು ಮೇಲ್ದರ್ಜೆಗೇರಿಸುವುದು ಮತ್ತು ಪ್ರಯಾಣಿಕರ ಸೇವೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

ಪರಿಷ್ಕೃತ ಟಿಕೆಟ್ ರದ್ದತಿ ನಿಯಮ
ನಿರ್ಗಮನಕ್ಕೆ 72 ಗಂಟೆಗಳಿಗಿಂತ ಮೊದಲು ರದ್ದುಪಡಿಸಿದ ದೃಢೀಕೃತ ಟಿಕೆಟ್‌ಗಳಿಗೆ, ಪ್ರಯಾಣಿಕರಿಗೆ ಗರಿಷ್ಟ ಮರುಪಾವತಿ ದೊರೆಯುತ್ತದೆ ಮತ್ತು ಪ್ರತಿ ಪ್ರಯಾಣಿಕರಿಗೆ ಕನಿಷ್ಠ ಫ್ಲಾಟ್ ರದ್ದತಿ ಶುಲ್ಕವನ್ನು ಮಾತ್ರ ಕಡಿತಗೊಳಿಸಲಾಗುತ್ತದೆ ಎಂದರು.

ರೈಲ್ವೆ ಇಲಾಖೆ ಆಫ್‌ಲೈನ್ ಟಿಕೆಟ್ ಹೊಂದಿರುವವರಿಗೆ ರದ್ದತಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಪ್ರಯಾಣಿಕರು ಈಗ ಯಾವುದೇ ರೈಲ್ವೆ ನಿಲ್ದಾಣದಿಂದ ಟಿಕೆಟ್‌ಗಳನ್ನು ರದ್ದುಗೊಳಿಸಬಹುದು. ಮೂಲತಃ ಟಿಕೆಟ್ ಬುಕ್ ಮಾಡಿದ ನಿಲ್ದಾಣವನ್ನು ಲೆಕ್ಕಿಸದೆ ಹೆಚ್ಚುವರಿಯಾಗಿ, ಪ್ರಯಾಣಿಕರು ಟಿಕೆಟ್‌ನಲ್ಲಿ ಉಲ್ಲೇಖಿಸಲಾದ ನಿರ್ಗಮನ ನಿಲ್ದಾಣದ ನಂತರ ಇರುವ ನಿಲ್ದಾಣದಿಂದ ರೈಲು ಹತ್ತಬಹುದು.

 

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

2 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

4 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

7 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

9 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

12 hours ago