ಹೊಸದಿಲ್ಲಿ : ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್ನ ಸಂಪೂರ್ಣ ಹಣ ಖೋತಾ ಆಗಲಿದೆ. ಟಿಕೆಟ್ ವಿತರಣೆ ಮತ್ತು ಮರುಪಾವತಿ ನೀತಿಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಗಮನಾರ್ಹ ಬದಲಾವಣೆಯನ್ನು ಬುಧವಾರದಿಂದ ಜಾರಿಗೆ ತಂದಿದೆ.
ಏ.1ರಿಂದ ರೈಲು ಹೊರಡುವ 8 ಗಂಟೆ ಮೊದಲು ಟಿಕೆಟ್ ರದ್ದುಗೊಳಿಸದಿದ್ದರೆ ನಿಮ್ಮ ಹಣ ರೀಫಂಡ್ ಆಗುವುದಿಲ್ಲ. ನೀವು ನಿಮ್ಮ ಪ್ರಯಾಣ ರದ್ದುಗೊಳಿಸಬೇಕಾದರೆ ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ಟಿಕೆಟ್ ರದ್ದು ಮಾಡಬೇಕಾಗುತ್ತದೆ.
ನಿರ್ಗಮನಕ್ಕೆ 24 ಗಂಟೆಗಳಿಂದ 8 ಗಂಟೆಗಳ ಮೊದಲು ಮಾಡಿದ ರದ್ದತಿಗೆ, ಪ್ರಯಾಣಿಕರು ಶೇ.50ರಷ್ಟು ಮರುಪಾವತಿಗೆ ಅರ್ಹರಾಗಿರುತ್ತಾರೆ. ಪ್ರಯಾಣಕ್ಕೆ 71 ಗಂಟೆಗಳಿಂದ 24 ಗಂಟೆಗಳ ಮೊದಲು ರದ್ದತಿ ಮಾಡಿದರೆ, ಶೇ.75ರಷ್ಟು ಮರುಪಾವತಿಯನ್ನು ಒದಗಿಸಲಾಗುತ್ತದೆ. ಇದಕ್ಕೂ ಮೊದಲು, ಪ್ರಯಾಣಕ್ಕೆ 72 ಗಂಟೆಗಳ ಮೊದಲು ರದ್ದುಗೊಳಿಸಿದಾಗಲೂ ಪ್ರಯಾಣಿಕರು ಪೂರ್ಣ ಮರುಪಾವತಿಯನ್ನು ಪಡೆಯುತ್ತಿದ್ದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ನೆಟ್ವರ್ಕ್ ಅನ್ನು ಮೇಲ್ದರ್ಜೆಗೇರಿಸುವುದು ಮತ್ತು ಪ್ರಯಾಣಿಕರ ಸೇವೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.
ಪರಿಷ್ಕೃತ ಟಿಕೆಟ್ ರದ್ದತಿ ನಿಯಮ
ನಿರ್ಗಮನಕ್ಕೆ 72 ಗಂಟೆಗಳಿಗಿಂತ ಮೊದಲು ರದ್ದುಪಡಿಸಿದ ದೃಢೀಕೃತ ಟಿಕೆಟ್ಗಳಿಗೆ, ಪ್ರಯಾಣಿಕರಿಗೆ ಗರಿಷ್ಟ ಮರುಪಾವತಿ ದೊರೆಯುತ್ತದೆ ಮತ್ತು ಪ್ರತಿ ಪ್ರಯಾಣಿಕರಿಗೆ ಕನಿಷ್ಠ ಫ್ಲಾಟ್ ರದ್ದತಿ ಶುಲ್ಕವನ್ನು ಮಾತ್ರ ಕಡಿತಗೊಳಿಸಲಾಗುತ್ತದೆ ಎಂದರು.
ರೈಲ್ವೆ ಇಲಾಖೆ ಆಫ್ಲೈನ್ ಟಿಕೆಟ್ ಹೊಂದಿರುವವರಿಗೆ ರದ್ದತಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಪ್ರಯಾಣಿಕರು ಈಗ ಯಾವುದೇ ರೈಲ್ವೆ ನಿಲ್ದಾಣದಿಂದ ಟಿಕೆಟ್ಗಳನ್ನು ರದ್ದುಗೊಳಿಸಬಹುದು. ಮೂಲತಃ ಟಿಕೆಟ್ ಬುಕ್ ಮಾಡಿದ ನಿಲ್ದಾಣವನ್ನು ಲೆಕ್ಕಿಸದೆ ಹೆಚ್ಚುವರಿಯಾಗಿ, ಪ್ರಯಾಣಿಕರು ಟಿಕೆಟ್ನಲ್ಲಿ ಉಲ್ಲೇಖಿಸಲಾದ ನಿರ್ಗಮನ ನಿಲ್ದಾಣದ ನಂತರ ಇರುವ ನಿಲ್ದಾಣದಿಂದ ರೈಲು ಹತ್ತಬಹುದು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…