ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್ ವಿರುದ್ಧ ಆಪ್ ಪಕ್ಷ ಬಂಡಾಯವೆದ್ದಿದೆ.
ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟಿಸಬೇಕು ಎಂದು ಆಪ್ ಪಕ್ಷದ ನಾಯಕರು ಇತರ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದಾರೆಂದು ವರದಿಯಾಗಿದೆ.
ಕಳೆದ 2013ರಲ್ಲಿ 40 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಹಾಯ ಮಾಡಿದ್ದರಿಂದ ದೆಹಲಿಯಲ್ಲಿ ತನ್ನ ಪ್ರಾಬಲ್ಯ ಕಳೆದುಕೊಂಡಿತು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಅಸಮಾಧಾನದ ಹೇಳಿಕೆ ನೀಡಿದ್ದರು.
ಅಜಯ್ ಮಾಕೇನ್ ಹೇಳಿಕೆಗೆ ನಮ್ಮ (ಆಪ್) ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಪಕ್ಷ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಂಡಿಯಾ ಒಕ್ಕೂಟದಲ್ಲಿ ಮತ್ತೆ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…