ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್ ವಿರುದ್ಧ ಆಪ್ ಪಕ್ಷ ಬಂಡಾಯವೆದ್ದಿದೆ.
ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟಿಸಬೇಕು ಎಂದು ಆಪ್ ಪಕ್ಷದ ನಾಯಕರು ಇತರ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದಾರೆಂದು ವರದಿಯಾಗಿದೆ.
ಕಳೆದ 2013ರಲ್ಲಿ 40 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಹಾಯ ಮಾಡಿದ್ದರಿಂದ ದೆಹಲಿಯಲ್ಲಿ ತನ್ನ ಪ್ರಾಬಲ್ಯ ಕಳೆದುಕೊಂಡಿತು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಅಸಮಾಧಾನದ ಹೇಳಿಕೆ ನೀಡಿದ್ದರು.
ಅಜಯ್ ಮಾಕೇನ್ ಹೇಳಿಕೆಗೆ ನಮ್ಮ (ಆಪ್) ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಪಕ್ಷ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಂಡಿಯಾ ಒಕ್ಕೂಟದಲ್ಲಿ ಮತ್ತೆ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…