ದೇಶ- ವಿದೇಶ

ಕಾಂಗ್ರೆಸ್‌ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಆಪ್‌

ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್‌ ವಿರುದ್ಧ ಆಪ್‌ ಪಕ್ಷ ಬಂಡಾಯವೆದ್ದಿದೆ.

ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್‌ ಪಕ್ಷವನ್ನು ಉಚ್ಚಾಟಿಸಬೇಕು ಎಂದು ಆಪ್‌ ಪಕ್ಷದ ನಾಯಕರು ಇತರ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದಾರೆಂದು ವರದಿಯಾಗಿದೆ.

ಕಳೆದ 2013ರಲ್ಲಿ 40 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್‌ ಸರ್ಕಾರಕ್ಕೆ ಕಾಂಗ್ರೆಸ್‌ ಪಕ್ಷ ಸಹಾಯ ಮಾಡಿದ್ದರಿಂದ ದೆಹಲಿಯಲ್ಲಿ ತನ್ನ ಪ್ರಾಬಲ್ಯ ಕಳೆದುಕೊಂಡಿತು ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಅಜಯ್‌ ಮಾಕೇನ್ ಅಸಮಾಧಾನದ ಹೇಳಿಕೆ ನೀಡಿದ್ದರು.

ಅಜಯ್‌ ಮಾಕೇನ್‌ ಹೇಳಿಕೆಗೆ ನಮ್ಮ (ಆಪ್‌) ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್‌ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಮತ್ತು ಕಾಂಗ್ರೆಸ್‌ ಪಕ್ಷ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಂಡಿಯಾ ಒಕ್ಕೂಟದಲ್ಲಿ ಮತ್ತೆ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

4 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago