ನವದೆಹಲಿ: ಲೋಕಸಭೆಯ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ಉಂಟಾಗಿದ್ದು, ಕಾಂಗ್ರೆಸ್ ವಿರುದ್ಧ ಆಪ್ ಪಕ್ಷ ಬಂಡಾಯವೆದ್ದಿದೆ.
ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟಿಸಬೇಕು ಎಂದು ಆಪ್ ಪಕ್ಷದ ನಾಯಕರು ಇತರ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದಾರೆಂದು ವರದಿಯಾಗಿದೆ.
ಕಳೆದ 2013ರಲ್ಲಿ 40 ದಿನಗಳ ಕಾಲ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಹಾಯ ಮಾಡಿದ್ದರಿಂದ ದೆಹಲಿಯಲ್ಲಿ ತನ್ನ ಪ್ರಾಬಲ್ಯ ಕಳೆದುಕೊಂಡಿತು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಅಸಮಾಧಾನದ ಹೇಳಿಕೆ ನೀಡಿದ್ದರು.
ಅಜಯ್ ಮಾಕೇನ್ ಹೇಳಿಕೆಗೆ ನಮ್ಮ (ಆಪ್) ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಪಕ್ಷ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಂಡಿಯಾ ಒಕ್ಕೂಟದಲ್ಲಿ ಮತ್ತೆ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…