ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ.
ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಹೀನಾಯ ಸೋಲಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಜನಾದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ. ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಜನರು ಅವರಿಗೆ ಮತ ಹಾಕಿದ ಎಲ್ಲಾ ಭರವಸೆಯನ್ನು ಅವರು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಅಂತೆಯೇ, ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಈ ಚುನಾವಣಾ ಫಲಿತಾಂಶವನ್ನು ನಾವು ನಿರೀಕ್ಷಿಸಿರಲಿಲ್ಲ. ತಮ್ಮ ಪಕ್ಷವು ಎಂದಿಗೂ ಅಧಿಕಾರಕ್ಕಾಗಿ ರಾಜಕೀಯದಲ್ಲಿರಲಿಲ್ಲ. ಜನರ ಸೇವೆಯೇ ನಮ್ಮ ಪಕ್ಷದ ಮುಖ್ಯ ಧ್ಯೇಯೋದ್ದೇಶವಾಗಿತ್ತು. ಜನರಿಗೆ ಸೇವೆ ಸಲ್ಲಿಸುವುದನ್ನು ನಮ್ಮ ಪಕ್ಷ ಮುಂದುವರಿಸುತ್ತದೆ. ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ವಹಿಸುವುದಲ್ಲದೇ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…