ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.
ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ ಸೌಲಭ್ಯಗಳನ್ನು ಮತ್ತು ಭದ್ರತೆಯನ್ನು ತ್ಯಜಿಸಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಆಪ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಾಮಾಣಿಕತೆ ಮತ್ತು ತ್ಯಾಗ ಮನೋಭಾವ ಹೊಂದಿರುವ ಕೇಜ್ರಿವಾಲ್ ತಮ್ಮ ಸಿಎಂ ನಿವಾಸ ಹಾಗೂ ತಮಗೆ ಸಿಕ್ಕಿರುವ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ತ್ಯಜಿಸುತ್ತಾರೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಮಾತನಾಡಿದ ಆಪ್ ಸಂಸದ ಸಂಜಯ್ ಸಿಂಗ್ ಅವರು, ಮುಂದಿನ ದಿನಗಳಲ್ಲಿ ಕೇಜ್ರಿವಾಲ್ ಅವರಿಗೆ ಜನ ಹೆಚ್ಚಿನ ಬಹುಮತದೊಂದಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಇನ್ನೊಂದು ವಾರದೊಳಗೆ ತಮ್ಮ ಮನೆಯನ್ನು ಖಾಲಿ ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಽಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…