ನ್ಯೂಯಾರ್ಕ್: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಮುಖವಾಗಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.
ಗೌತಮ್ ಅದಾನಿ ಜೊತೆಗೆ ಹಲವರು ಆರೋಪಿತರಲ್ಲಿ ಸೇರ್ಪಡೆಯಾಗಿದ್ದು, ಅವರ ವಿರುದ್ಧವೂ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ.
ಗೌತಮ್ ಅದಾನಿ, ಸೈರಿಲ್ ಕೆಬನೆಸ್, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರ ಹೆಸರು ಕೂಡ ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿದೆ.
ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…