ದೇಶ- ವಿದೇಶ

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ಅರುಣ ಕುಮಾರ ದಿಸ್ಸಾನಾಯಕ ಪ್ರಮಾಣ ವಚನ ಸ್ವೀಕಾರ

ಕೊಲಂಬೊ: ಶ್ರೀಲಂಕಾದ ಒಂಭತ್ತನೇ ಅಧ್ಯಕ್ಷರಾಗಿ ಎಡಪಂಥೀಯ ಪಕ್ಷದ ಅರುಣಾ ಕುಮಾರ ಡಿಸ್ಸಾನಾಯಕ ಅವರು ಆಯ್ಕಾಯಾಗಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶ್ರೀಲಂಕಾ ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಹಾಗೂ ಭ್ರಷ್ಠಾಚಾರವನ್ನು ತೊಡೆದು ಹಾಕುವ ಭರವಸೆಯ ಮಧ್ಯೆ 56ನೇ ವರ್ಷದ ಅನುರಾ ಅವರು, ರಾಷ್ಟ್ರಪತಿ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಶ್ರೀಲಂಕಾದಲ್ಲಿ ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪರೆಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್‌ ಪೀಪಲ್ಸ್‌ ಪವರ್‌ ನಾಯಕ , ತಮ್ಮ ಎದುರಾಳಿ ಪ್ರತಿಸ್ಪರ್ಧಿಯಾದ ಸಮಗಿ ಜನ ಬಲವೇಗಯ ಸಜಿತ್‌ ಪ್ರೇಮದಾಸ ಅವರನ್ನು ಸೋಲಿಸಿ, ವಿಜೇತರಾಗಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅನುರಾ ಅವರು ಮಾತನಾಡಿ, ಜನಾದೇಶವನ್ನು ಗೌರವಿಸಿದ್ದಕ್ಕಾಗಿ ಹಾಗೂ ಅಧಿಕಾರದ ಶಾಂತಿಯುತ ಹಸ್ತಾಂತರವನ್ನು ಸುಗಮಗೊಳಿಸಿದ್ದಕ್ಕಾಗಿ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರಿಗೆ ಧನ್ಯವಾದ ಸಲ್ಲಿಸಿದರು.

ಶ್ರೀಲಂಕಾದಲ್ಲಿ 2022ರ ದೇಶದ ಆರ್ಥಿಕ ಬಿಕ್ಕಟ್ಟು ಎದುರಿಸಿದ ಬಳಿಕ ಸಾಮೂಹಿಕ ಪ್ರತಿಭಟನೆಯಿಂದ ಗೋಟಾಬಯ ರಾಜಪಕ್ಸೆ ಅವರನ್ನು ಪದಚ್ಯುತಗೊಳಿಸಲಾಯಿತು. ಆ ನಂತರ ದೇಶದಲ್ಲಿ ಚುನಾವಣೆಗಳೆ ನಡೆದಿರಲಿಲ್ಲ. ಇದೇ ಪ್ರಥಮ ಬಾರಿಗೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಶೆ.50ಕ್ಕಿಂತ ಅಧಿಕ ಮತಗಳನ್ನು ಪಡೆಯದೇ ಇರುವ ಕಾರಣ 2ನೇ ಸುತ್ತಿನ ಮತ ಎಣಿಕೆಗೆ ಚುನಾವಣಾ ಆಯೋಗ ಭಾನುವಾರ ಆದೇಶ ಹೊರಡಿಸಿತ್ತು. ಈ ಮತ ಎಣಿಕೆಯಲ್ಲಿ ಅನುಣಾ ಕುಮಾರ 1,05,264 ಪ್ರಾಶಸ್ತ್ಯಗಳೊಂದಿಗೆ 5.74 ಮಿಲಿಯನ್‌ ಮತಗಳನ್ನು ಗಳಿಸಿ ವಿಜೇತರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

6 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago