ದೇಶ- ವಿದೇಶ

ಗಡಿ ವಿಚಾರವಾಗಿ ಮತ್ತೊಮ್ಮೆ ತಗಾದೆ ತೆಗೆದ ಚೀನ : ಅರುಣಾಚಲ ಪ್ರದೇಶದ ೩೦ ಸ್ಥಳಗಳಿಗೆ ಮರು ನಾಮಕರಣ ಮಾಡಿದ ಚೀನ !

ನವದೆಹಲಿ:  ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು  ‌ಸ್ಥಳಗಳಿಗೆ  ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ.

ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಇದೀಗ ಭಾರತದ ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಪ್ರದೇಶಗಳು ಚೀನಕ್ಕೆ ಸೇರಿದೆ ಎಂದು ಹೇಳುವ ಮೂಲಕ ಪಟ್ಟಿ ಒಂದನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಅರುಣಾಚಲ ಪ್ರದೇಶದ ಮೇಲೆ ತನ್ನ ಹಕ್ಕನ್ನು ಸಾಧಿಸಲು ಮುಂದಾಗಿರುವ ಚಿನ ಮತ್ತೊಂದು ಹೊಸಾ ತಗಾದೆ ಶುರು ಮಾಡಿದೆ.

ಭಾರತ ವಿರೋಧ : ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಸ್ಥಳಗಳಿಗೆ ಹೊಸ ಹೆಸರುಗಳನ್ನಿಡುವುದನ್ನು ಭಾರತದ ವಿರೋಧಿಸಿರುವ, ‘ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ. ಇಲ್ಲಿನ ಪ್ರದೇಶಗಳಿಗೆ ಹೊಸದಾಗಿ ನಾಮಕರಣ ಮಾಡುವುದರಿಂದ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದೆ.

‘ಝಂಗ್ನಾನ್‌ನ ವಿವಿಧ ಪ್ರದೇಶಗಳಿಗೆ 30 ಚೀನಿ ಹೆಸರಿರುವ ಪಟ್ಟಿಯನ್ನು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ’ ಎಂದು ಗ್ಲೋಬಲ್‌ ಟೈಮ್ಸ್‌ ತಿಳಿಸಿದೆ.

‘ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಸರುಗಳನ್ನು ಘೋಷಿಸಲಾಗಿದ್ದು, ಇವು ಮೇ 1ರಿಂದ ಜಾರಿಗೆ ಬರಲಿವೆ’ ಎಂದೂ ಮಾಹಿತಿ ನೀಡಿದೆ.

ಈ ಹಿಂದೆಯೂ ಪಟ್ಟಿ ಪ್ರಕಟಿಸಿದ್ದ ಚೀನ : ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017ರಲ್ಲಿ ಆರು, 2021ರಲ್ಲಿ 15 ಹಾಗೂ 2023ರಲ್ಲಿ 11 ಸ್ಥಳಗಳಿಗೆ ಹೊಸ ಹೆಸರುಗಳ ಪಟ್ಟಿಯನ್ನು ಪ್ರಕಟಿಸಿತ್ತು.

ಮೋದಿ ವಿರುದ್ಧ ಪ್ರತಿಕಾರ :   ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 13 ಸಾವಿರ ಅಡಿ ಉದ್ದದ ಸೇಲಾ ಸುರಂಗವನ್ನು ಉದ್ಘಾಟಿಸಿದ್ದರು. ಇದಕ್ಕೆ ಪ್ರತೀಕಾರ ಕ್ರಮವಾಗಿ ಚೀನಾ ಹೊಸ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

6 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

7 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

8 hours ago