ದೇಶ- ವಿದೇಶ

ಗಡಿ ವಿಚಾರವಾಗಿ ಮತ್ತೊಮ್ಮೆ ತಗಾದೆ ತೆಗೆದ ಚೀನ : ಅರುಣಾಚಲ ಪ್ರದೇಶದ ೩೦ ಸ್ಥಳಗಳಿಗೆ ಮರು ನಾಮಕರಣ ಮಾಡಿದ ಚೀನ !

ನವದೆಹಲಿ:  ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು  ‌ಸ್ಥಳಗಳಿಗೆ  ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ.

ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಇದೀಗ ಭಾರತದ ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಪ್ರದೇಶಗಳು ಚೀನಕ್ಕೆ ಸೇರಿದೆ ಎಂದು ಹೇಳುವ ಮೂಲಕ ಪಟ್ಟಿ ಒಂದನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಅರುಣಾಚಲ ಪ್ರದೇಶದ ಮೇಲೆ ತನ್ನ ಹಕ್ಕನ್ನು ಸಾಧಿಸಲು ಮುಂದಾಗಿರುವ ಚಿನ ಮತ್ತೊಂದು ಹೊಸಾ ತಗಾದೆ ಶುರು ಮಾಡಿದೆ.

ಭಾರತ ವಿರೋಧ : ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಸ್ಥಳಗಳಿಗೆ ಹೊಸ ಹೆಸರುಗಳನ್ನಿಡುವುದನ್ನು ಭಾರತದ ವಿರೋಧಿಸಿರುವ, ‘ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ. ಇಲ್ಲಿನ ಪ್ರದೇಶಗಳಿಗೆ ಹೊಸದಾಗಿ ನಾಮಕರಣ ಮಾಡುವುದರಿಂದ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದೆ.

‘ಝಂಗ್ನಾನ್‌ನ ವಿವಿಧ ಪ್ರದೇಶಗಳಿಗೆ 30 ಚೀನಿ ಹೆಸರಿರುವ ಪಟ್ಟಿಯನ್ನು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ’ ಎಂದು ಗ್ಲೋಬಲ್‌ ಟೈಮ್ಸ್‌ ತಿಳಿಸಿದೆ.

‘ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಸರುಗಳನ್ನು ಘೋಷಿಸಲಾಗಿದ್ದು, ಇವು ಮೇ 1ರಿಂದ ಜಾರಿಗೆ ಬರಲಿವೆ’ ಎಂದೂ ಮಾಹಿತಿ ನೀಡಿದೆ.

ಈ ಹಿಂದೆಯೂ ಪಟ್ಟಿ ಪ್ರಕಟಿಸಿದ್ದ ಚೀನ : ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017ರಲ್ಲಿ ಆರು, 2021ರಲ್ಲಿ 15 ಹಾಗೂ 2023ರಲ್ಲಿ 11 ಸ್ಥಳಗಳಿಗೆ ಹೊಸ ಹೆಸರುಗಳ ಪಟ್ಟಿಯನ್ನು ಪ್ರಕಟಿಸಿತ್ತು.

ಮೋದಿ ವಿರುದ್ಧ ಪ್ರತಿಕಾರ :   ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 13 ಸಾವಿರ ಅಡಿ ಉದ್ದದ ಸೇಲಾ ಸುರಂಗವನ್ನು ಉದ್ಘಾಟಿಸಿದ್ದರು. ಇದಕ್ಕೆ ಪ್ರತೀಕಾರ ಕ್ರಮವಾಗಿ ಚೀನಾ ಹೊಸ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

7 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

11 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 hours ago