ದೇಶ- ವಿದೇಶ

ಗಡಿ ವಿಚಾರವಾಗಿ ಮತ್ತೊಮ್ಮೆ ತಗಾದೆ ತೆಗೆದ ಚೀನ : ಅರುಣಾಚಲ ಪ್ರದೇಶದ ೩೦ ಸ್ಥಳಗಳಿಗೆ ಮರು ನಾಮಕರಣ ಮಾಡಿದ ಚೀನ !

ನವದೆಹಲಿ:  ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು  ‌ಸ್ಥಳಗಳಿಗೆ  ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ.

ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಇದೀಗ ಭಾರತದ ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಪ್ರದೇಶಗಳು ಚೀನಕ್ಕೆ ಸೇರಿದೆ ಎಂದು ಹೇಳುವ ಮೂಲಕ ಪಟ್ಟಿ ಒಂದನ್ನು ಬಿಡುಗಡೆ ಮಾಡಿದೆ.

ಈ ಮೂಲಕ ಅರುಣಾಚಲ ಪ್ರದೇಶದ ಮೇಲೆ ತನ್ನ ಹಕ್ಕನ್ನು ಸಾಧಿಸಲು ಮುಂದಾಗಿರುವ ಚಿನ ಮತ್ತೊಂದು ಹೊಸಾ ತಗಾದೆ ಶುರು ಮಾಡಿದೆ.

ಭಾರತ ವಿರೋಧ : ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು ಸ್ಥಳಗಳಿಗೆ ಹೊಸ ಹೆಸರುಗಳನ್ನಿಡುವುದನ್ನು ಭಾರತದ ವಿರೋಧಿಸಿರುವ, ‘ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ. ಇಲ್ಲಿನ ಪ್ರದೇಶಗಳಿಗೆ ಹೊಸದಾಗಿ ನಾಮಕರಣ ಮಾಡುವುದರಿಂದ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದೆ.

‘ಝಂಗ್ನಾನ್‌ನ ವಿವಿಧ ಪ್ರದೇಶಗಳಿಗೆ 30 ಚೀನಿ ಹೆಸರಿರುವ ಪಟ್ಟಿಯನ್ನು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ’ ಎಂದು ಗ್ಲೋಬಲ್‌ ಟೈಮ್ಸ್‌ ತಿಳಿಸಿದೆ.

‘ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಸರುಗಳನ್ನು ಘೋಷಿಸಲಾಗಿದ್ದು, ಇವು ಮೇ 1ರಿಂದ ಜಾರಿಗೆ ಬರಲಿವೆ’ ಎಂದೂ ಮಾಹಿತಿ ನೀಡಿದೆ.

ಈ ಹಿಂದೆಯೂ ಪಟ್ಟಿ ಪ್ರಕಟಿಸಿದ್ದ ಚೀನ : ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017ರಲ್ಲಿ ಆರು, 2021ರಲ್ಲಿ 15 ಹಾಗೂ 2023ರಲ್ಲಿ 11 ಸ್ಥಳಗಳಿಗೆ ಹೊಸ ಹೆಸರುಗಳ ಪಟ್ಟಿಯನ್ನು ಪ್ರಕಟಿಸಿತ್ತು.

ಮೋದಿ ವಿರುದ್ಧ ಪ್ರತಿಕಾರ :   ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 13 ಸಾವಿರ ಅಡಿ ಉದ್ದದ ಸೇಲಾ ಸುರಂಗವನ್ನು ಉದ್ಘಾಟಿಸಿದ್ದರು. ಇದಕ್ಕೆ ಪ್ರತೀಕಾರ ಕ್ರಮವಾಗಿ ಚೀನಾ ಹೊಸ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

43 seconds ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

13 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

19 mins ago

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

23 mins ago