ದೇಶ- ವಿದೇಶ

ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆ ಹೆಸರಿನಲ್ಲಿ ಅರ್ಚಕರಿಗೆ 18 ಸಾವಿರ ರೂ. ಸಹಾಯಧನ: ಅರವಿಂದ್‌ ಕ್ರೇಜಿವಾಲ್‌ ಘೋಷಣೆ

ನವದೆಹಲಿ: ದೆಹಲಿಯ ದೇವಾಲಯಗಳಲ್ಲಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆಯಲ್ಲಿ ಪ್ರತಿ ತಿಂಗಳು 18 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಮ್‌ ಆದ್ಮಿ ಪಕ್ಷ ಗೆದ್ದರೆ, ದೆಹಲಿಯ ದೇವಸ್ಥಾನಗಳ ಅರ್ಚಕರು ಹಾಗೂ ಗುರುದ್ವಾರ ಸಾಹಿಬ್‌ನ ಗ್ರಂಥಿಗಳಿಗೆ ಪ್ರತಿ ತಿಂಗಳು 18 ಸಾವಿರ ರೂ.ಗಳಷ್ಟು ಧನಸಹಾಯ ಮಾಡಲಾಗುತ್ತದೆ ಎಂದು ಘೋಷಸಿದ್ದಾರೆ.

ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ ಸಮಾಜಕ್ಕೆ ಅರ್ಚಕರ ಆಧ್ಯಾತ್ಮಿಕ ಕೊಡುಗೆ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಅವರ ಪ್ರಯತ್ನಗಳಿಗೆ ಸಲ್ಲಿಸುವ ಗೌರವವಾಗಿದೆ. ಹೀಗಾಗಿ ಬಿಜೆಪಿ ಪಕ್ಷದವರು ಇದನ್ನು ತಡೆಯುವ ಪ್ರಯತ್ನ ಮಾಡಬೇಡಿ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ 2025ರ ಫೆಬ್ರವರಿ ತಿಂಗಳಿನಲ್ಲಿ ವಿಧಾನ ಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಹಿಂದೂ ದೇವಸ್ಥಾನ ಹಾಗೂ ಗುರುದ್ವಾರಗಳಲ್ಲಿ ಪೂಜೆ ಮಾಡುವವರಿಗೆ ಪೂಜಾರಿ ಗ್ರಂಥಿ ಸಮ್ಮಾನ್‌ ಯೋಜನೆ ಹೆಸರಿನಲ್ಲಿ ಸಹಾಯಧನದ ಭರವಸೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

19 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

26 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

43 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago