ದೇಶ- ವಿದೇಶ

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

ದೆಹಲಿಯಲ್ಲಿ ಸದ್ಯ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟ ಮಾಡಿದೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯರ ಪೀಠವು ಮೇ ೧೭ರಂದು ತೀರ್ಪು ಕಾಯ್ದಿರಿಸಿತ್ತು. ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಚುನಾವಣೆಯ ಪ್ರಚಾರಕ್ಕಾಗಿ ಮೇ ೧೦ ರಂದು ೨೧ ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನ ಬಿಡುಗಡೆ ಮಾಡುವಂತ ಸುಪ್ರೀಂ ಕೋರ್ಟ್‌ ಆದೇಶ ಮಾಡಿತ್ತು. ಚುನಾವಣೆ ಪ್ರಚಾರ ಬಳಿಕ ತಿಹಾರ್‌ ಜೈಲಿಗೆ ಬಂದು ಜೂನ್‌ ೨ ರಂದು ಕೇಜ್ರಿವಾಲ್‌  ಶರಣಾಗಿದ್ದರು.

ಆದಾದ ನಂತರ ದೆಹಲಿ ರೌಸ್‌ ಅವೆನ್ಯೂ ಕೋರ್ಟ್‌ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶ ಮಾಡಿತ್ತು. ಆದರೆ ಕೆಳ ನ್ಯಾಯಾಲದ ತೀರ್ಪಿನ ವಿರುದ್ಧ ಇಡಿ ದೆಹಲಿ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿತ್ತು. ಮತ್ತು ಅದಕ್ಕೆ ತಡೆಯಾಜ್ಞೆ ನೀಡಿತು. ಇಡಿ ಅರ್ಜಿಯನ್ನು ಆಲಿಸಿದ ದೆಹಲಿ ಹೈಕೋರ್ಟ್‌ ರೌಸ್‌ ಅವೆನ್ಯೂ ಕೋರ್ಟ್‌ ತೀರ್ಪಿಗೆ ತಡೆ ನೀಡಿತ್ತು.

ದೆಹಲಿ ಹೈಕೋರ್ಟ್‌ ತೀರ್ಪನ್ನು ಸಿಎಂ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ ಹಾಕಿದ್ದರು. ಇಂದು‌ ಅವರ ಅರ್ಜಿ ಮೇರೆಗೆ ವಿಚಾರಣೆ ನಡೆಸಿದ ಕೋರ್ಟ್ ದೆಹಲಿ ಸಿಎಂಗೆ ಮಧ್ಯಂತರ ಜಾಮೀನು ನೀಡಿ ಆದೇಶ ಮಾಡಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago