ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂಭಾಗದಲ್ಲಿ ಬಂಧಿಸಿದ ಸಿಬಿಐ ನಡೆ ವಿರೋಧಿಸಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಎಎಪಿ ಕಾನೂನು ತಜ್ಞರ ತಂಡ ಮಾಹಿತಿ ನೀಡಿರುವುದಾಗಿ ʼಲೈವ್ಲಾʼ ಸುದ್ದಿ ಹಂಚಿಕೊಂಡಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನ ಮಾಡಿದ್ದ ಸಿಬಿಐ ನಡೆ ಬಗ್ಗೆ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದ ಕೇಜ್ರಿವಾಲ್ ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್ ಬಳಿ ಸಮರ್ಪಕ ಕಾರಗಳಿಲ್ಲ ಎಂದು ಮಖ್ಯ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಹೇಳಿದ್ದರು.
ಜುಲೈ 17 ರಂದು ಅರ್ಜಿ ವಜಾಗೊಳಿಸಿದ ಕೋರ್ಟ್, ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಅವಕಾಶ ನೀಡಿತ್ತು. ಅದರಂತೆ ಈಗ ತಮ್ಮ ವಿರುದ್ಧ ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತ ತಿಹಾರ್ ಜೈಲಿನಲ್ಲಿ ನ್ಯಾಯಂಗ ಬಂಧನವಾಗಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ತನ್ನ ವಶಕ್ಕೆ ಪಡೆದಿತ್ತು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…