ನವದೆಹಲಿ: ಸಾರ್ವತ್ರಿಕ ಚುನಾವಣೆ ವ್ಯವಸ್ಥೆಯಲ್ಲಿ ಭಾಗಿಯಾಗಲು ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮತ್ತೆ ತಿಹಾರ್ ಜೈಲಿಗೆ ವಾಪಸ್ ಆಗಲಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್ ಅವರು, ಇಂದು ನಾನು ತಿಹಾರ್ ಜೈಲಿಗೆ ಹೋಗಿ ಶರಣಾಗುತ್ತೇನೆ. 21 ದಿನಗಳ ಕಾಲ ಲೋಕಸಭಾ ಚುನಾವಣೆಯಲಿ ಭಾಗವಹಿಸಿಲು ಅವಕಾಶ ನೀಡಿd ಸುಪ್ರೀಂ ಕೋರ್ಟ್ಗೆ ನನ್ನ ಧನ್ಯವಾದಗಳು ಎಂದು ಉಲ್ಲೇಖಿಸಿದ್ದಾರೆ.
ಜೈಲಿಗೆ ತೆರಳುವ ಮುನ್ನ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿ ಅವರಿಗೆ ನಮನ ಸಲ್ಲಿಸುತ್ತೇನೆ. ಅಲ್ಲಿಂದ ಹನುಮಾನ್ ದೇಗುಲಕ್ಕೆ ತೆರಳಿ ಪಾರ್ಥನೆ ಸಲ್ಲಿಸುತ್ತೇನ ಎಂದು ಹೇಳಿದ್ದಾರೆ.
ಬಳಿಕ ಎಎಪಿ ಪಕ್ಷದ ಕಚೇರಿಯಲ್ಲಿ, ಕಾರ್ಯಕರ್ತರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ನೀವೆಲ್ಲರೂ ನಿಮ್ಮ ಆರೋಗ್ಯ ನೋಡಿಕೊಳ್ಳಿ. ಜೈಲಿನಲ್ಲಿದ್ದರೂ ನಿಮ್ಮ ಬಗ್ಗೆ ಚಿಂತೆ ಕಾಡಲಿದೆ. ನೀವು ಸಂತಸದಿಂದ ಇದ್ದರೆ, ನಾನು ಸಂತಸದಿಂದ ಇರುತ್ತೇನೆ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಸಿದಂತೆ ಹಣ ವರ್ಗಾವಣೆ ಪ್ರಕರಣದಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮೇ. 10 ರಂದು 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…