ಚಂಡೀಗಢ: ಭಾರತದಲ್ಲಿ ಸಂವಿಧಾನ ಇರುವವರೆಗೂ ಒಂದು ದೇಶ, ಒಂದೇ ಚುನಾವಣೆ ಜಾರಿ ಅಸಾಧ್ಯ. ಒಂದು ವೇಳೆ ಅದನ್ನು ಜಾರಿಗೆ ತರುವುದಾದರೆ ಸಂವಿಧಾನಕ್ಕೆ ಕನಿಷ್ಠ 5 ತಿದ್ದುಪಡಿಗಳ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಅವಧಿಯಲ್ಲಿಯೇ ಒಂದು ದೇಶ, ಒಂದು ಚುನಾವಣೆ ಜಾರಿಗೆ ತರುವ ಹೇಳಿಕೆ ನೀಡಿದ್ದಾರೆ. ಆದರೆ, ಸಂವಿಧಾನ ತಿದ್ದುಪಡಿ ಮಾಡುವ ಅವರ ಯೋಜನೆಗೆ ಬೆಂಬಲ ಸೂಚಿಸುವಷ್ಟು ಸಂಖ್ಯೆ ಲೋಕಸಭೆಯಲ್ಲಾಗಲಿ ಅಥವಾ ರಾಜ್ಯಸಭೆಯಲ್ಲಾಗಲಿ ಇಲ್ಲ. ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಜಾರಿಗೊಳಿಸುವುದೇ ಆದರೆ ಅದಕ್ಕೆ ಇಂಡಿಯಾ ಒಕ್ಕೂಟದ ವಿರೋಧವಿದೆ ಎಂದು ಹೇಳಿದ್ದಾರೆ.
ಮೀಸಲಾತಿಯ ಕುರಿತು ಪ್ರಧಾನಿ ಮೋದಿ ಹೇಳಿಕೆಯ ಕಾಂಗ್ರೆಸ್ ಪಕ್ಷ ಮೀಸಲಾತಿ ರದ್ದತಿಯನ್ನು ಬಯಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಚಿದಂಬರಂ ಅವರು ʼಮೀಸಲಾತಿಯನ್ನು ನಾವೇಕೆ ರದ್ದು ಮಾಡುತ್ತೇವೆʼ ಎಂದು ಮರು ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಜಾತಿಗಣತಿ ಆಧಾರದ ಮೇಲೆ ಮೀಸಲಾತಿ ಜಾರಿಗೆ ತರಬೇಕು ಎಂದು ಪ್ರಥಮ ಬಾರಿಗೆ ಘೋಷಿಸಿದ್ದೇ ಕಾಂಗ್ರೆಸ್ ಪಕ್ಷ. ನಾವು ಕೇವಲ ಮೀಸಲಾತಿಗೆ ಇರುವ ಶೇ.50ರಷ್ಟು ಮಿತಿಯನ್ನು ಮಾತ್ರ ತೆಗೆದು ಹಾಕುತ್ತೇವೆ ಎಂದು ಹೇಳಿದ್ದೇವೆ ಅಷ್ಟೇ. ನಮ್ಮ ಬೇಡಿಕೆ ಇರುವುದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ತರಬೇಕು. ಈ ಬಗ್ಗೆ ಮೋದಿ ಅವರು ಹೇಳುವ ಮಾತುಗಳನ್ನು ನಂಬಬೇಡಿ ಎಂದರು.
ಮೋದಿ ಹೇಳಿದ್ದೇನು..?
ಭಾನುವಾರ ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ದಲಿತರ ಮೀಸಲಾತಿಯನ್ನು ಕಸಿದುಕೊಳ್ಳಲು ʼರಾಜ ಕುಟುಂಬʼ ಬಯಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಇರುವವರೆಗೂ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಮೀಸಲಾತಿಗಳನ್ನೂ ಬದಲಾಯಿಸಲು ಅವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದರು.
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ʼಸತತ ಚುನಾವಣೆಗಳು ರಾಷ್ಟ್ರದ ಅಭಿವೃದ್ಧಿಗೆ ಆಡಚಣೆ ಉಂಟು ಮಾಡುತ್ತವೆ. ಹೀಗಾಗಿ ಒಂದು ದೇಶ, ಒಂದು ಚುನಾವಣೆ ಭಾರತಕ್ಕೆ ಅಗತ್ಯʼ ಎಂಬ ಹೇಳಿಕೆಯನ್ನು ನೀಡಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…