ದೇಶ- ವಿದೇಶ

ಸಂವಿಧಾನ ಇರುವವರೆಗೂ ಒಂದು ದೇಶ ಒಂದು ಚುನಾವಣೆ ಅಸಾಧ್ಯ: ಪಿ.ಚಿದಂಬರಂ

ಚಂಡೀಗಢ: ಭಾರತದಲ್ಲಿ ಸಂವಿಧಾನ ಇರುವವರೆಗೂ ಒಂದು ದೇಶ, ಒಂದೇ ಚುನಾವಣೆ ಜಾರಿ ಅಸಾಧ್ಯ. ಒಂದು ವೇಳೆ ಅದನ್ನು ಜಾರಿಗೆ ತರುವುದಾದರೆ ಸಂವಿಧಾನಕ್ಕೆ ಕನಿಷ್ಠ 5 ತಿದ್ದುಪಡಿಗಳ ಅವಶ್ಯಕತೆ ಇದೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಅವಧಿಯಲ್ಲಿಯೇ ಒಂದು ದೇಶ, ಒಂದು ಚುನಾವಣೆ ಜಾರಿಗೆ ತರುವ ಹೇಳಿಕೆ ನೀಡಿದ್ದಾರೆ. ಆದರೆ, ಸಂವಿಧಾನ ತಿದ್ದುಪಡಿ ಮಾಡುವ ಅವರ ಯೋಜನೆಗೆ ಬೆಂಬಲ ಸೂಚಿಸುವಷ್ಟು ಸಂಖ್ಯೆ ಲೋಕಸಭೆಯಲ್ಲಾಗಲಿ ಅಥವಾ ರಾಜ್ಯಸಭೆಯಲ್ಲಾಗಲಿ ಇಲ್ಲ. ದೇಶದಲ್ಲಿ ಒಂದು ದೇಶ, ಒಂದು ಚುನಾವಣೆ ಜಾರಿಗೊಳಿಸುವುದೇ ಆದರೆ ಅದಕ್ಕೆ ಇಂಡಿಯಾ ಒಕ್ಕೂಟದ ವಿರೋಧವಿದೆ ಎಂದು ಹೇಳಿದ್ದಾರೆ.

ಮೀಸಲಾತಿಯ ಕುರಿತು ಪ್ರಧಾನಿ ಮೋದಿ ಹೇಳಿಕೆಯ  ಕಾಂಗ್ರೆಸ್‌ ಪಕ್ಷ ಮೀಸಲಾತಿ ರದ್ದತಿಯನ್ನು ಬಯಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಚಿದಂಬರಂ ಅವರು ʼಮೀಸಲಾತಿಯನ್ನು ನಾವೇಕೆ ರದ್ದು ಮಾಡುತ್ತೇವೆʼ ಎಂದು ಮರು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಜಾತಿಗಣತಿ ಆಧಾರದ ಮೇಲೆ  ಮೀಸಲಾತಿ  ಜಾರಿಗೆ ತರಬೇಕು ಎಂದು ಪ್ರಥಮ ಬಾರಿಗೆ ಘೋಷಿಸಿದ್ದೇ ಕಾಂಗ್ರೆಸ್‌ ಪಕ್ಷ. ನಾವು ಕೇವಲ ಮೀಸಲಾತಿಗೆ ಇರುವ ಶೇ.50ರಷ್ಟು ಮಿತಿಯನ್ನು ಮಾತ್ರ ತೆಗೆದು ಹಾಕುತ್ತೇವೆ ಎಂದು ಹೇಳಿದ್ದೇವೆ ಅಷ್ಟೇ. ನಮ್ಮ ಬೇಡಿಕೆ ಇರುವುದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ತರಬೇಕು. ಈ ಬಗ್ಗೆ ಮೋದಿ ಅವರು ಹೇಳುವ ಮಾತುಗಳನ್ನು ನಂಬಬೇಡಿ ಎಂದರು.

ಮೋದಿ ಹೇಳಿದ್ದೇನು..?

ಭಾನುವಾರ ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ದಲಿತರ ಮೀಸಲಾತಿಯನ್ನು ಕಸಿದುಕೊಳ್ಳಲು ʼರಾಜ ಕುಟುಂಬʼ ಬಯಸುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಇರುವವರೆಗೂ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದ ಮೀಸಲಾತಿಗಳನ್ನೂ ಬದಲಾಯಿಸಲು ಅವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದರು.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ʼಸತತ ಚುನಾವಣೆಗಳು ರಾಷ್ಟ್ರದ ಅಭಿವೃದ್ಧಿಗೆ ಆಡಚಣೆ ಉಂಟು ಮಾಡುತ್ತವೆ. ಹೀಗಾಗಿ ಒಂದು ದೇಶ, ಒಂದು ಚುನಾವಣೆ ಭಾರತಕ್ಕೆ ಅಗತ್ಯʼ ಎಂಬ ಹೇಳಿಕೆಯನ್ನು ನೀಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

8 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

8 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

8 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

8 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

11 hours ago