ದೇಶ- ವಿದೇಶ

ಮೋದಿ ಧ್ಯಾನದ ಬಗ್ಗೆ ಖರ್ಗೆ ಹೇಳಿದಿಷ್ಟು

ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಧ್ಯಾನ ಮಂಟಪದ ಪ್ರಧಾನಿ ನರೇಂದ್ರ ಮೋದಿ ಅವರ 45 ಗಂಟೆಗಳ ಕಾಲ ಧ್ಯಾನದ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, ಮೋದಿ ಅವರು ೪೫ ಗಂಟೆಗಳ ಕಾಲ ಧ್ಯಾನವನ್ನು ಮನೆಯಲ್ಲೇ ಮಾಡಬಹುದಿತ್ತು, ಕನ್ಯಾಕುಮಾರಿಗೆ ಹೋಗುವ ಅಗತ್ಯ ಏನಿದೆ? ಹತ್ತು ಸಾವಿರ ಪೊಲೀಸ್‌ ಸಿಬ್ಬಂದಿ ಅವರ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ. ಏಕೆ ಈ ನಾಟಕ? ನೀವು ಮನೆಯಲ್ಲಿಯೇ ಪೂಜೆ ಮತ್ತು ಧ್ಯಾನ ಮಾಡಬಹುದು. ಭಧ್ರತೆಗಾಗಿ ಸಾವಿರಾರು ಪೊಲೀಸರನ್ನು ಅಲ್ಲಿಗೆ ಕರೆದುಕೊಂಡಿ ಹೋಗಿದ್ದೀರಿ. ಇದೇನು ಪ್ರದರ್ಶನ? ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ
ಇಂಡಿಯಾ ಬಣವು ೨೭೩ ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ತನ್ನ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ. ಮೈತ್ರಿಕೂಟಕ್ಕೆ ೨೭೨ ಸ್ಥಾನಗಳ ಅಗತ್ಯವಿದೆ. ಮೈತ್ರಿ ಪಕ್ಷವು ಬಿಜೆಪಿಗಿಂತ ಹೆಚ್ಚು ಮುಂದಿದೆ. ಬಿಜೆಪಿ ಮತ್ತು ಮೋದಿ ಆತಂಕದಲ್ಲಿದ್ದಾರೆ. ನಾವು ೨೭೩ ಸ್ಥಾನಗಳನ್ನು ಪಡೆಯುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಜನರು ಅಂತಹ ದ್ವೇಷ ಭಾಷಣಗಳನ್ನು ಕೇಳಲು ಆಸಕ್ತಿ ಹೊಂದಿಲ್ಲ. ಜನರು ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂದರು.

ಜಾತಿ, ಧರ್ಮದ ಬಗ್ಗೆ ಮಾತನಾಡುವ ಮೋದಿ, ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಮಾತನಾಡಲ್ಲ. ಮೋದಿ ಇದರ ಬಗ್ಗೆ ಮಾತನಾಡಬೇಕಿತ್ತು. ಕಳೆದ ೧೦ ವರ್ಷಗಳಲ್ಲಿ ಮೋದಿ ಏನು ಮಾಡಿದ್ದಾರೆ ಅದನ್ನು ಜನರಿಗೆ ತಿಳಿಸಬೇಕು ಎಂದಿದ್ದಾರೆ ಖರ್ಗೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

3 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

1 hour ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

1 hour ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

1 hour ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

3 hours ago