ದೇಶ- ವಿದೇಶ

ಮೋದಿ ಧ್ಯಾನದ ಬಗ್ಗೆ ಖರ್ಗೆ ಹೇಳಿದಿಷ್ಟು

ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಧ್ಯಾನ ಮಂಟಪದ ಪ್ರಧಾನಿ ನರೇಂದ್ರ ಮೋದಿ ಅವರ 45 ಗಂಟೆಗಳ ಕಾಲ ಧ್ಯಾನದ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.

ಖಾಸಗಿ ವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, ಮೋದಿ ಅವರು ೪೫ ಗಂಟೆಗಳ ಕಾಲ ಧ್ಯಾನವನ್ನು ಮನೆಯಲ್ಲೇ ಮಾಡಬಹುದಿತ್ತು, ಕನ್ಯಾಕುಮಾರಿಗೆ ಹೋಗುವ ಅಗತ್ಯ ಏನಿದೆ? ಹತ್ತು ಸಾವಿರ ಪೊಲೀಸ್‌ ಸಿಬ್ಬಂದಿ ಅವರ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ. ಏಕೆ ಈ ನಾಟಕ? ನೀವು ಮನೆಯಲ್ಲಿಯೇ ಪೂಜೆ ಮತ್ತು ಧ್ಯಾನ ಮಾಡಬಹುದು. ಭಧ್ರತೆಗಾಗಿ ಸಾವಿರಾರು ಪೊಲೀಸರನ್ನು ಅಲ್ಲಿಗೆ ಕರೆದುಕೊಂಡಿ ಹೋಗಿದ್ದೀರಿ. ಇದೇನು ಪ್ರದರ್ಶನ? ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ
ಇಂಡಿಯಾ ಬಣವು ೨೭೩ ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ತನ್ನ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ. ಮೈತ್ರಿಕೂಟಕ್ಕೆ ೨೭೨ ಸ್ಥಾನಗಳ ಅಗತ್ಯವಿದೆ. ಮೈತ್ರಿ ಪಕ್ಷವು ಬಿಜೆಪಿಗಿಂತ ಹೆಚ್ಚು ಮುಂದಿದೆ. ಬಿಜೆಪಿ ಮತ್ತು ಮೋದಿ ಆತಂಕದಲ್ಲಿದ್ದಾರೆ. ನಾವು ೨೭೩ ಸ್ಥಾನಗಳನ್ನು ಪಡೆಯುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಜನರು ಅಂತಹ ದ್ವೇಷ ಭಾಷಣಗಳನ್ನು ಕೇಳಲು ಆಸಕ್ತಿ ಹೊಂದಿಲ್ಲ. ಜನರು ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂದರು.

ಜಾತಿ, ಧರ್ಮದ ಬಗ್ಗೆ ಮಾತನಾಡುವ ಮೋದಿ, ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಮಾತನಾಡಲ್ಲ. ಮೋದಿ ಇದರ ಬಗ್ಗೆ ಮಾತನಾಡಬೇಕಿತ್ತು. ಕಳೆದ ೧೦ ವರ್ಷಗಳಲ್ಲಿ ಮೋದಿ ಏನು ಮಾಡಿದ್ದಾರೆ ಅದನ್ನು ಜನರಿಗೆ ತಿಳಿಸಬೇಕು ಎಂದಿದ್ದಾರೆ ಖರ್ಗೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

25 mins ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

3 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

3 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

3 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

3 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

4 hours ago