ನವದೆಹಲಿ: ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಧ್ಯಾನ ಮಂಟಪದ ಪ್ರಧಾನಿ ನರೇಂದ್ರ ಮೋದಿ ಅವರ 45 ಗಂಟೆಗಳ ಕಾಲ ಧ್ಯಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.
ಖಾಸಗಿ ವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, ಮೋದಿ ಅವರು ೪೫ ಗಂಟೆಗಳ ಕಾಲ ಧ್ಯಾನವನ್ನು ಮನೆಯಲ್ಲೇ ಮಾಡಬಹುದಿತ್ತು, ಕನ್ಯಾಕುಮಾರಿಗೆ ಹೋಗುವ ಅಗತ್ಯ ಏನಿದೆ? ಹತ್ತು ಸಾವಿರ ಪೊಲೀಸ್ ಸಿಬ್ಬಂದಿ ಅವರ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ. ಏಕೆ ಈ ನಾಟಕ? ನೀವು ಮನೆಯಲ್ಲಿಯೇ ಪೂಜೆ ಮತ್ತು ಧ್ಯಾನ ಮಾಡಬಹುದು. ಭಧ್ರತೆಗಾಗಿ ಸಾವಿರಾರು ಪೊಲೀಸರನ್ನು ಅಲ್ಲಿಗೆ ಕರೆದುಕೊಂಡಿ ಹೋಗಿದ್ದೀರಿ. ಇದೇನು ಪ್ರದರ್ಶನ? ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ
ಇಂಡಿಯಾ ಬಣವು ೨೭೩ ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ತನ್ನ ಭದ್ರಕೋಟೆಗಳನ್ನು ಕಳೆದುಕೊಳ್ಳಲಿದೆ. ಮೈತ್ರಿಕೂಟಕ್ಕೆ ೨೭೨ ಸ್ಥಾನಗಳ ಅಗತ್ಯವಿದೆ. ಮೈತ್ರಿ ಪಕ್ಷವು ಬಿಜೆಪಿಗಿಂತ ಹೆಚ್ಚು ಮುಂದಿದೆ. ಬಿಜೆಪಿ ಮತ್ತು ಮೋದಿ ಆತಂಕದಲ್ಲಿದ್ದಾರೆ. ನಾವು ೨೭೩ ಸ್ಥಾನಗಳನ್ನು ಪಡೆಯುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಜನರು ಅಂತಹ ದ್ವೇಷ ಭಾಷಣಗಳನ್ನು ಕೇಳಲು ಆಸಕ್ತಿ ಹೊಂದಿಲ್ಲ. ಜನರು ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂದರು.
ಜಾತಿ, ಧರ್ಮದ ಬಗ್ಗೆ ಮಾತನಾಡುವ ಮೋದಿ, ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಮಾತನಾಡಲ್ಲ. ಮೋದಿ ಇದರ ಬಗ್ಗೆ ಮಾತನಾಡಬೇಕಿತ್ತು. ಕಳೆದ ೧೦ ವರ್ಷಗಳಲ್ಲಿ ಮೋದಿ ಏನು ಮಾಡಿದ್ದಾರೆ ಅದನ್ನು ಜನರಿಗೆ ತಿಳಿಸಬೇಕು ಎಂದಿದ್ದಾರೆ ಖರ್ಗೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…