ಜೈಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸರ್ಕಾರ ಮಹಾನ್ ಚೇತನರಾದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಕಡೆಗಣಿಸಿದ್ದು, ಇದೀಗ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿಯೂ ಅನಗತ್ಯವಾದ ವಿವಾದ ಸೃಷ್ಠಿಸುತ್ತಿದೆ ಕಿಡಿಕಾರಿದ್ದಾರೆ.
ವಿರೋಧ ಪಕ್ಷ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಭವಿಷ್ಯದಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡಿದೆಯೇ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದಿದ್ದಾರೆ.
ಈ ಹಿಂದೆ 2010ರಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಉಪ ರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಅವರ ಕುಟುಂಬದೊಂದಿಗೆ ಚರ್ಚಿಸಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿಕೊಡಲಾಗಿತ್ತು. ಅದರಂತೆಯೇ ಆ ಸ್ಥಳದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್ ಠಾಕ್ರೆ ನಿಧನರಾದಾಗಲೂ ಸಹ ಅವರ ಅಂತ್ಯಕ್ರಿಯೆಗಾಗಿ ಶಿವಾಜಿ ಪಾರ್ಕ್ನಲ್ಲಿ ವಿಶೇಷ ಸ್ಥಳವನ್ನು ನೀಡಿತ್ತು. ಕಾಂಗ್ರೆಸ್ ಪಕ್ಷ ಯಾವಾಗಳು ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯ ನೀಡುತ್ತದೆ. ಆದರೆ ಭಾರತದ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ವಿಚಾರದಲ್ಲಿ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂತಹ ವರ್ತನೆ ತೋರಿರುವುದು ದುರದೃಷ್ಣಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…