ಜೈಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸರ್ಕಾರ ಮಹಾನ್ ಚೇತನರಾದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಕಡೆಗಣಿಸಿದ್ದು, ಇದೀಗ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿಯೂ ಅನಗತ್ಯವಾದ ವಿವಾದ ಸೃಷ್ಠಿಸುತ್ತಿದೆ ಕಿಡಿಕಾರಿದ್ದಾರೆ.
ವಿರೋಧ ಪಕ್ಷ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಭವಿಷ್ಯದಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡಿದೆಯೇ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದಿದ್ದಾರೆ.
ಈ ಹಿಂದೆ 2010ರಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಉಪ ರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಅವರ ಕುಟುಂಬದೊಂದಿಗೆ ಚರ್ಚಿಸಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿಕೊಡಲಾಗಿತ್ತು. ಅದರಂತೆಯೇ ಆ ಸ್ಥಳದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್ ಠಾಕ್ರೆ ನಿಧನರಾದಾಗಲೂ ಸಹ ಅವರ ಅಂತ್ಯಕ್ರಿಯೆಗಾಗಿ ಶಿವಾಜಿ ಪಾರ್ಕ್ನಲ್ಲಿ ವಿಶೇಷ ಸ್ಥಳವನ್ನು ನೀಡಿತ್ತು. ಕಾಂಗ್ರೆಸ್ ಪಕ್ಷ ಯಾವಾಗಳು ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯ ನೀಡುತ್ತದೆ. ಆದರೆ ಭಾರತದ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ವಿಚಾರದಲ್ಲಿ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂತಹ ವರ್ತನೆ ತೋರಿರುವುದು ದುರದೃಷ್ಣಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…