ದೇಶ- ವಿದೇಶ

ಮನಮೋಹನ್‌ ಸಿಂಗ್‌ ಸ್ಮಾರಕ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಅಶೋಕ್‌ ಗೆಹಲೋತ್‌ ವಾಗ್ದಾಳಿ

ಜೈಪುರ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೇಂದ್ರ ಸರ್ಕಾರ ಸರ್ಕಾರ ಮಹಾನ್‌ ಚೇತನರಾದ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆಯನ್ನು ಕಡೆಗಣಿಸಿದ್ದು, ಇದೀಗ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿಯೂ ಅನಗತ್ಯವಾದ ವಿವಾದ ಸೃಷ್ಠಿಸುತ್ತಿದೆ ಕಿಡಿಕಾರಿದ್ದಾರೆ.

ವಿರೋಧ ಪಕ್ಷ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ್‌ ಸಿಂಗ್‌ ಅವರ ಸ್ಮಾರಕವನ್ನು ಭವಿಷ್ಯದಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡಿದೆಯೇ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದಿದ್ದಾರೆ.

ಈ ಹಿಂದೆ 2010ರಲ್ಲಿ ಕಾಂಗ್ರೆಸ್‌ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಉಪ ರಾಷ್ಟ್ರಪತಿ ಭೈರೋನ್‌ ಸಿಂಗ್‌ ಶೇಖಾವತ್‌ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಅವರ ಕುಟುಂಬದೊಂದಿಗೆ ಚರ್ಚಿಸಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿಕೊಡಲಾಗಿತ್ತು. ಅದರಂತೆಯೇ ಆ ಸ್ಥಳದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್‌ ಠಾಕ್ರೆ ನಿಧನರಾದಾಗಲೂ ಸಹ ಅವರ ಅಂತ್ಯಕ್ರಿಯೆಗಾಗಿ ಶಿವಾಜಿ ಪಾರ್ಕ್‌ನಲ್ಲಿ ವಿಶೇಷ ಸ್ಥಳವನ್ನು ನೀಡಿತ್ತು. ಕಾಂಗ್ರೆಸ್‌ ಪಕ್ಷ ಯಾವಾಗಳು ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯ ನೀಡುತ್ತದೆ. ಆದರೆ ಭಾರತದ ಆರ್ಥಿಕ ತಜ್ಞ ಮನಮೋಹನ್‌ ಸಿಂಗ್‌ ಅವರ ವಿಚಾರದಲ್ಲಿ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂತಹ ವರ್ತನೆ ತೋರಿರುವುದು ದುರದೃಷ್ಣಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

3 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

7 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago