ದೇಶ- ವಿದೇಶ

ಏಷ್ಯಾದ ಅತ್ಯಂತ ಹಿರಿಯ ಆನೆ ’ವತ್ಸಲಾ’ ಇನ್ನಿಲ್ಲ

ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ.

ವತ್ಸಲಾಗೆ ೧೦೦ ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವತ್ಸಲಾ ಅತ್ಯಂತ ಹಿರಿಯ ಮತ್ತು ಪ್ರೀತಿಯ ಆನೆಯಾಗಿತ್ತು.

ವರ್ಷಗಳ ಕಾಲ, ವತ್ಸಲಾ ಪ್ರವಾಸಿ ಆಕರ್ಷಣೆಯಾಗಿತ್ತು ಮತ್ತು ಅತ್ಯಂತ ಹಿರಿಯಳಾಗಿದ್ದರಿಂದ, ಅವಳು ಅಭಯಾರಣ್ಯದಲ್ಲಿರುವ ಸಂಪೂರ್ಣ ಆನೆಗಳ ಗುಂಪನ್ನು ಮುನ್ನಡೆಸುತ್ತಿದ್ದಳು.

ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ ೧.೩೦ ರ ಸುಮಾರಿಗೆ ಮೃತಪಟ್ಟಿದೆ.

ಅರಣ್ಯ ಸಿಬ್ಬಂದಿ ಮತ್ತು ವನ್ಯಜೀವಿ ಪ್ರಿಯರು ಪ್ರೀತಿಯಿಂದ `ದಾದಿ’ ಮತ್ತು `ದಾಯಿ ಮಾ’ ಎಂದು ಕರೆಯುತ್ತಿದ್ದರು. ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ಆಕೆಯ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಅಭಯಾರಣ್ಯದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವೇರಿಸಿದರು.

ಕೇರಳದಿಂದ ತಂದಿದ್ದ ಆನೆ: ೧೯೭೧ರಲ್ಲಿ ಕೇರಳದ ನೀಲಂಬೂರು ಕಾಡಿನಿಂದ ವತ್ಸಲಾಳನ್ನು ಮಧ್ಯಪ್ರದೇಶಕ್ಕೆ ಕರೆತರಲಾಗಿತ್ತು. ಮೊದಲು ಅವಳನ್ನು ನರ್ಮದಾಪುರಂನಲ್ಲಿ ಇರಿಸಲಾಯಿತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ಖೈರೈಯಾನ್ ನಾಲಾದಲ್ಲಿ ಪ್ರತಿದಿನ ಅವಳಿಗೆ ಸ್ನಾನ ಮಾಡಿಸಿ ಗಂಜಿ ಮುಂತಾದ ಮೃದುವಾದ ಆಹಾರವನ್ನು ನೀಡಲಾಗುತ್ತಿತ್ತು. ವಯಸ್ಸಾಗಿದ್ದ ಕಾರಣ ತುಂಬಾ ದೂರ ನಡೆಯಲು ಸಾಧ್ಯವಾಗುತ್ತಿರಲಿಲ್ಲ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

47 mins ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

48 mins ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

2 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

2 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

2 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

2 hours ago