Asia's oldest elephant 'Vatsala' is no more
ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ.
ವತ್ಸಲಾಗೆ ೧೦೦ ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವತ್ಸಲಾ ಅತ್ಯಂತ ಹಿರಿಯ ಮತ್ತು ಪ್ರೀತಿಯ ಆನೆಯಾಗಿತ್ತು.
ವರ್ಷಗಳ ಕಾಲ, ವತ್ಸಲಾ ಪ್ರವಾಸಿ ಆಕರ್ಷಣೆಯಾಗಿತ್ತು ಮತ್ತು ಅತ್ಯಂತ ಹಿರಿಯಳಾಗಿದ್ದರಿಂದ, ಅವಳು ಅಭಯಾರಣ್ಯದಲ್ಲಿರುವ ಸಂಪೂರ್ಣ ಆನೆಗಳ ಗುಂಪನ್ನು ಮುನ್ನಡೆಸುತ್ತಿದ್ದಳು.
ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ ೧.೩೦ ರ ಸುಮಾರಿಗೆ ಮೃತಪಟ್ಟಿದೆ.
ಅರಣ್ಯ ಸಿಬ್ಬಂದಿ ಮತ್ತು ವನ್ಯಜೀವಿ ಪ್ರಿಯರು ಪ್ರೀತಿಯಿಂದ `ದಾದಿ’ ಮತ್ತು `ದಾಯಿ ಮಾ’ ಎಂದು ಕರೆಯುತ್ತಿದ್ದರು. ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ಆಕೆಯ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಅಭಯಾರಣ್ಯದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವೇರಿಸಿದರು.
ಕೇರಳದಿಂದ ತಂದಿದ್ದ ಆನೆ: ೧೯೭೧ರಲ್ಲಿ ಕೇರಳದ ನೀಲಂಬೂರು ಕಾಡಿನಿಂದ ವತ್ಸಲಾಳನ್ನು ಮಧ್ಯಪ್ರದೇಶಕ್ಕೆ ಕರೆತರಲಾಗಿತ್ತು. ಮೊದಲು ಅವಳನ್ನು ನರ್ಮದಾಪುರಂನಲ್ಲಿ ಇರಿಸಲಾಯಿತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ಖೈರೈಯಾನ್ ನಾಲಾದಲ್ಲಿ ಪ್ರತಿದಿನ ಅವಳಿಗೆ ಸ್ನಾನ ಮಾಡಿಸಿ ಗಂಜಿ ಮುಂತಾದ ಮೃದುವಾದ ಆಹಾರವನ್ನು ನೀಡಲಾಗುತ್ತಿತ್ತು. ವಯಸ್ಸಾಗಿದ್ದ ಕಾರಣ ತುಂಬಾ ದೂರ ನಡೆಯಲು ಸಾಧ್ಯವಾಗುತ್ತಿರಲಿಲ್ಲ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…