ದೇಶ- ವಿದೇಶ

ಏಷ್ಯಾದ ಅತ್ಯಂತ ಹಿರಿಯ ಆನೆ ’ವತ್ಸಲಾ’ ಇನ್ನಿಲ್ಲ

ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ.

ವತ್ಸಲಾಗೆ ೧೦೦ ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವತ್ಸಲಾ ಅತ್ಯಂತ ಹಿರಿಯ ಮತ್ತು ಪ್ರೀತಿಯ ಆನೆಯಾಗಿತ್ತು.

ವರ್ಷಗಳ ಕಾಲ, ವತ್ಸಲಾ ಪ್ರವಾಸಿ ಆಕರ್ಷಣೆಯಾಗಿತ್ತು ಮತ್ತು ಅತ್ಯಂತ ಹಿರಿಯಳಾಗಿದ್ದರಿಂದ, ಅವಳು ಅಭಯಾರಣ್ಯದಲ್ಲಿರುವ ಸಂಪೂರ್ಣ ಆನೆಗಳ ಗುಂಪನ್ನು ಮುನ್ನಡೆಸುತ್ತಿದ್ದಳು.

ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ ೧.೩೦ ರ ಸುಮಾರಿಗೆ ಮೃತಪಟ್ಟಿದೆ.

ಅರಣ್ಯ ಸಿಬ್ಬಂದಿ ಮತ್ತು ವನ್ಯಜೀವಿ ಪ್ರಿಯರು ಪ್ರೀತಿಯಿಂದ `ದಾದಿ’ ಮತ್ತು `ದಾಯಿ ಮಾ’ ಎಂದು ಕರೆಯುತ್ತಿದ್ದರು. ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ಆಕೆಯ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಅಭಯಾರಣ್ಯದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವೇರಿಸಿದರು.

ಕೇರಳದಿಂದ ತಂದಿದ್ದ ಆನೆ: ೧೯೭೧ರಲ್ಲಿ ಕೇರಳದ ನೀಲಂಬೂರು ಕಾಡಿನಿಂದ ವತ್ಸಲಾಳನ್ನು ಮಧ್ಯಪ್ರದೇಶಕ್ಕೆ ಕರೆತರಲಾಗಿತ್ತು. ಮೊದಲು ಅವಳನ್ನು ನರ್ಮದಾಪುರಂನಲ್ಲಿ ಇರಿಸಲಾಯಿತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ಖೈರೈಯಾನ್ ನಾಲಾದಲ್ಲಿ ಪ್ರತಿದಿನ ಅವಳಿಗೆ ಸ್ನಾನ ಮಾಡಿಸಿ ಗಂಜಿ ಮುಂತಾದ ಮೃದುವಾದ ಆಹಾರವನ್ನು ನೀಡಲಾಗುತ್ತಿತ್ತು. ವಯಸ್ಸಾಗಿದ್ದ ಕಾರಣ ತುಂಬಾ ದೂರ ನಡೆಯಲು ಸಾಧ್ಯವಾಗುತ್ತಿರಲಿಲ್ಲ.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

15 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago