Asia's oldest elephant 'Vatsala' is no more
ಮಧ್ಯಪ್ರದೇಶ : ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಕೊನೆಯುಸಿರೆಳೆದಿದೆ.
ವತ್ಸಲಾಗೆ ೧೦೦ ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವತ್ಸಲಾ ಅತ್ಯಂತ ಹಿರಿಯ ಮತ್ತು ಪ್ರೀತಿಯ ಆನೆಯಾಗಿತ್ತು.
ವರ್ಷಗಳ ಕಾಲ, ವತ್ಸಲಾ ಪ್ರವಾಸಿ ಆಕರ್ಷಣೆಯಾಗಿತ್ತು ಮತ್ತು ಅತ್ಯಂತ ಹಿರಿಯಳಾಗಿದ್ದರಿಂದ, ಅವಳು ಅಭಯಾರಣ್ಯದಲ್ಲಿರುವ ಸಂಪೂರ್ಣ ಆನೆಗಳ ಗುಂಪನ್ನು ಮುನ್ನಡೆಸುತ್ತಿದ್ದಳು.
ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ ೧.೩೦ ರ ಸುಮಾರಿಗೆ ಮೃತಪಟ್ಟಿದೆ.
ಅರಣ್ಯ ಸಿಬ್ಬಂದಿ ಮತ್ತು ವನ್ಯಜೀವಿ ಪ್ರಿಯರು ಪ್ರೀತಿಯಿಂದ `ದಾದಿ’ ಮತ್ತು `ದಾಯಿ ಮಾ’ ಎಂದು ಕರೆಯುತ್ತಿದ್ದರು. ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ಆಕೆಯ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಅಭಯಾರಣ್ಯದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವೇರಿಸಿದರು.
ಕೇರಳದಿಂದ ತಂದಿದ್ದ ಆನೆ: ೧೯೭೧ರಲ್ಲಿ ಕೇರಳದ ನೀಲಂಬೂರು ಕಾಡಿನಿಂದ ವತ್ಸಲಾಳನ್ನು ಮಧ್ಯಪ್ರದೇಶಕ್ಕೆ ಕರೆತರಲಾಗಿತ್ತು. ಮೊದಲು ಅವಳನ್ನು ನರ್ಮದಾಪುರಂನಲ್ಲಿ ಇರಿಸಲಾಯಿತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ಖೈರೈಯಾನ್ ನಾಲಾದಲ್ಲಿ ಪ್ರತಿದಿನ ಅವಳಿಗೆ ಸ್ನಾನ ಮಾಡಿಸಿ ಗಂಜಿ ಮುಂತಾದ ಮೃದುವಾದ ಆಹಾರವನ್ನು ನೀಡಲಾಗುತ್ತಿತ್ತು. ವಯಸ್ಸಾಗಿದ್ದ ಕಾರಣ ತುಂಬಾ ದೂರ ನಡೆಯಲು ಸಾಧ್ಯವಾಗುತ್ತಿರಲಿಲ್ಲ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…