Mysore
34
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾನುವಾರ ನೌಬೋಯಿಚಾ (ಉತ್ತರ ಲಖಿಂಪುರ ಜಿಲ್ಲೆ)ಯಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿಗಳನ್ನು ಪ್ರಕಟಿಸಿದರು.

ಮಹಿಳಾ ಕಲ್ಯಾಣ, ಆರೋಗ್ಯ ಸೇವೆ, ಭೂಮಿ ಹಕ್ಕು ಹಾಗೂ ಜುಬೀನ್‌ ಗಾರ್ಗ್‌ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸುವ ಭರವಸೆ ಸೇರಿದಂತೆ ಐದು ಗ್ಯಾರಂಟಿಗಳನ್ನು ಅವರು ಘೋಷಿಸಿದರು.

ಈ ಐದು ಗ್ಯಾರಂಟಿಗಳು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ತಕ್ಷಣ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ ಅವರು, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ಮತ್ತು ಭಯದ ವಾತಾವರಣವನ್ನು ತೀವ್ರವಾಗಿ ಟೀಕಿಸಿದರು.

ಅಸ್ಸಾಂ ವಿಧಾನಸಭಾ ಚುನಾವಣೆ ಏಪ್ರಿಲ್ 9 ರಂದು ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.

Tags:
error: Content is protected !!