ನಾರ್ವೆ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್ಗೆ ಅಧಿಕೃತ ಭೇಟಿ ನೀಡಿತು.
1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು.
ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು.
ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…