ದೇಶ- ವಿದೇಶ

ನಾರ್ವೆ ಸಂಸತ್ತಿಗೆ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಭೇಟಿ

ನಾರ್ವೆ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು.

1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು.

ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು.

ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

15 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

45 mins ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

12 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

15 hours ago